ಪ್ರವಾಹ : ಗೋವನಕೊಪ್ಪ ಗ್ರಾಮದಲ್ಲಾದ ಹಾನಿ ವೀಕ್ಷಿಸಿದ ಡಿಸಿ
Flood: DC inspects damage in Govankoppa village
ಪ್ರವಾಹ : ಗೋವನಕೊಪ್ಪ ಗ್ರಾಮದಲ್ಲಾದ ಹಾನಿ ವೀಕ್ಷಿಸಿದ ಡಿಸಿ
ಬಾಗಲಕೋಟೆ 28: ಮಲಪ್ರಭಾ ನದಿ ಪ್ರವಾಹದಿಂದ ಹಾನಿಗೊಳಗಾದ ಬಾದಾಮಿ ತಾಲೂಕಿನ ಗೋವನಕೊಪ್ಪದ ಗ್ರಾಮ ವಿವಿಧ ಕೃಷಿ, ತೋಟಗಾರಿಕೆ ಬೆಳೆ ಹಾಗೂ ಶಾಲಾ ಕೊಠಡಿಗಳನ್ನು ಜಿಲ್ಲಾಧಿಕಾರಿ ಸಂಗಪ್ಪ ಗುರುವಾರ ವೀಕ್ಷಣೆ ಮಾಡಿದರು.
ಗೋವನಕೊಪ್ಪ ಗ್ರಾಮಕ್ಕೆ ಬೇಟಿ ನೀಡಿದ ಜಿಲ್ಲಾಧಿಕಾರಿಗಳು ಅತಿವೃಷ್ಟಿ, ಪ್ರವಾಹದಿಂದ ಸರ್ವೆ ನಂ.11/1ರ ಭೀಮಪ್ಪ ಹೂವಪ್ಪ ಯರಗೊಪ್ಪ ಅವರ ಜಮೀನಿನಲ್ಲಿ ಹಾನಿಯಾದ ಈರುಳ್ಳಿ ಬೆಳೆಯನ್ನು ವೀಕ್ಷಣೆ ಮಾಡಿದರು. ಅಲ್ಲದೇ ಸರ್ವೆ ನಂ.49/2ರ ಬಾಳಪ್ಪ ಕೊಟಗಿ ಜಮೀನಿನಲ್ಲಿ ಬೆಳೆದ ಪೇರಲ, ಸರ್ವೆ ನಂ.50/3ರ ತುಳಸಿಗಿರೆಪ್ಪ ಸಣ್ಣಪ್ಪನವರ, ಸರ್ವೆ ನಂ.50/4ರ ಹೂಳಿಯಪ್ಪ ಸಣ್ಣಪ್ಪನವರ ಜಮೀನಿನಲ್ಲಿ ಬೆಳೆದ ಕಬ್ಬು ಹಾಗೂ ಸರ್ವೆ ನಂ.8/6 ಯಂಕಪ್ಪ ಕರಕಿಕಟ್ಟಿ ಅವರ ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳ ಹಾನಿಯಾಗಿರುವದನ್ನು ವೀಕ್ಷಣೆ ಮಾಡಿದರು. ಜಮೀನಿನಲ್ಲಿ ನೀರಿನ ಮಟ್ಟ ಕಡಿಮೆಯಾದ ನಂತರ ವಿವಿಧ ಇಲಾಖೆಯಿಂದ ಜಂಟಿ ಸಮೀಕ್ಷೆ ಕೈಗೊಂಡು ಸೂಕ್ತ ಪರಿಹಾರಕ್ಕಾಗಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.
ಗೋವನಕೊಪ್ಪ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಬೇಟಿ ನೀಡಿ ಅವರು ಶಾಲಾ ಕೊಠಡಿಗಳನ್ನು ವಿಕ್ಷಣೆ ಮಾಡಿ, ಕೊಠಡಿಗಳು ಶಿಥಿಲಗೊಂಡಿರುವದನ್ನು ಕಂಡು ತಾತ್ಕಾಲಿಕ ಶೆಡ್ಡ್ಗಳನ್ನು ನಿರ್ಮಾಣ ಮಾಡುವ ಮೂಲಕ ವಿಧ್ಯಾರ್ಥಿಗಳಿಗೆ ಪಾಠ ಭೋದನೆಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲು ಮುಖ್ಯೋಪಾದ್ಯಾಯರಿಗೆ ಸೂಚನೆ ನೀಡಿದರು. ನಂತರ ಗ್ರಾಮದಲ್ಲಿರುವ ಸೇತುವೆಗೆ ಬೇಟಿ ನೀಡಿ, ನೀರಿನ ಮಟ್ಟವನ್ನು ಪರೀಶೀಲಿಸಿದರು. ನದಿ ಪಾತ್ರದಲ್ಲಿ ಒತ್ತುವರಿಯಾಗಿರುವುದನ್ನು ಗಮನಿಸಿ, ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯ ಕೇಂದ್ರ (ಏಖಖಖಂಖಅ) ದಿಂದ ಕೂಡಲೇ ನಕಾಶೆಯನ್ನು ಪಡೆದು ಒತ್ತುವರಿ ತೆರವುಗೊಳಿಸಲು ಕ್ರಮಕೈಗೊಳ್ಳುವಂತೆ ಬಾದಾಮಿ ತಹಶೀಲ್ದಾರ ಕಾವ್ಯಶ್ರೀಗೆ ಸೂಚಿಸಿದರು.
ಹಾನಿ ವೀಕ್ಷಣೆ ಸಂದರ್ಭದಲ್ಲಿ ಸಹಾಯಕ ಕೃಷಿ ನಿರ್ದೇಶಕ ಅಶೋಕ ತಿರಕನ್ನವರ, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಬಾಳನಗೌಡ ಪಾಟೀಲ, ಕುಳಗೇರಿ ಹೋಬಳಿ ಮಟ್ಟದ ಕಂದಾಯ ನೀರೀಕ್ಷಕ ಶ್ರೀಧರ ವಿಶ್ವಕರ್ಮ ಹಾಗೂ ಗ್ರಾಮ ಲೆಕ್ಕಾಧಿಕಾರಿ ಬಸವರಾಜ ಹಳ್ಳೂರ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 