ಹಳ್ಳಿಗಾಡಿನಲ್ಲಿ ಜನಪದ ಸಾಹಿತ್ಯ ಜೀವಂತ: ಡಾ.ಅಂಜಿನಾ
ಲೋಕದರ್ಶನ ವರದಿ
ಹೂವಿನಹಡಗಲಿ 27: ಜನಪದ ಇತರ ಸಾಹಿತ್ಯದ ತಾಯಿಬೇರು,ಗ್ರಾಮೀಣ ಪ್ರದೇಶದಲ್ಲಿ ಮನುಷ್ಯನ ಬದುಕಿನ ಶೈಲಿಯ ಭಾಗವಾಗಿ ಜನಪದವನ್ನು ಅಳವಡಿಸಿಕೊಂಡು ದಣಿದ ದೇಹಕ್ಕೆ ತಮ್ಮ ಕೆಲಸದ ಬಿಡುವಿನ ವೇಳೆ ಹಾಡುಗಳನ್ನು ಹಾಡುವ ಮೂಲಕ ಇನ್ನು ಜೀವಂತವಾಗಿದೆ ಎಂದು ಲೇಖಕಿ ಡಾ.ಅಂಜಿನಾಕೃಷ್ಣಪ್ಪ ಹೇಳಿದರು.
ಪಟ್ಟಣದ ಎಸ್ಕೆಜಿಜೆ ಕಾಲೇಜು ಆವರಣದಲ್ಲಿ ಬಸರಹಳ್ಳಿಯ ಜ್ಞಾನಭಾರತಿ ವಿದ್ಯಾಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಭಾವಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಜನಪದ ಸಂಸ್ಕೃತಿಯನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿ ಇಂದಿನ ಯುವ ಪೀಳಿಗೆ ಮೇಲೆ ಇದೆ ಎಂದರು.
ಶಿಕ್ಷಕರಾದ ವೀರೇಶ, ಬಿ.ಲಿಂಗಪ್ಪ, ಕುಮಾರಸ್ವಾಮಿ ಮಾತನಾಡಿದರು. ಕಾಲೇಜಿನ ಉಪಪ್ರಾಚಾರ್ಯ ಚಂದ್ರಗೌಡ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಕಲಾವಿದ ಕೆ.ಸಿ.ಪರಶುರಾಮ ಅಂಗೂರು, ಎಂ.ಪರಶುರಾಮ ಸಿಬ್ಬಂದಿ ಇದ್ದರು. ಓಂಕಾಂ ಚನ್ನಮ್ಮ ಮತ್ತು ತಂಡ ಅಂಗೂರು ಇವರಿಂದ ಸೋಬಾನೆ ಪದಗಳು, ಹಿರೇಹಡಗಲಿ ಕೊರವರ ರಮೇಶ ಮತ್ತು ತಂಡದಿಂದ ಕ್ಲಾರಿಯೋನೇಟ್,ವಾದನ, ಬಾವಸಂಗಮ ಕಾರ್ಯಕ್ರಮ ನಡೆದವು. ಶಿಕ್ಷಕಿ ಎಚ್.ಎಂ.ಸುಮಂಗಲ ಹಣ್ಣಿ ,ನರೇಶ ನಿರ್ವಹಿಸಿದರು.
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ 