ಜಾನಪದ ಕಲಾ ಮೇಳ ಯಶಸ್ವಿ : ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳ
Folklore festival a success: Folk arts are the lifeblood of our culture
ಯಮಕನಮರಡಿ 02: ಜನಪದ ಕಲೆಗಳು ನಮ್ಮ ಸಂಸ್ಕೃತಿಯ ಜೀವಾಳವಾಗಿದ್ದು ಅವುಗಳನ್ನು ಉಳಿಸಲು ಹಾಗೂಮುಂದಿನ ಪೀಳಿಗೆಗೆ ಸಾಗಲು ಜನಪದ ಕಲೆಗಳಿಗೆ ಪ್ರೋತ್ಸಾಹ ನೀಡುವುದು ಅತ್ಯಂತ ಅಗತ್ಯ, ಇಂದಿನ ಮೊಬೈಲ್ ಯುಗದಲ್ಲಿ ಜನಪದ ಕಲೆಗಳು ನಿಧಾನವಾಗಿ ನಶಿಸುತ್ತಿವೆ. ಅವುಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಸಾಮಾಜಿಕ ಹೊಣೆಗಾರಿಕೆ ಎಂದು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಕಿರಣ ಚೌಗಲಾ ಅಭಿಪ್ರಾಯಪಟ್ಟರು
ಹುಕ್ಕೇರಿ ತಾಲೂಕಿನ ಯಲ್ಲಾಪುರ ಗ್ರಾಮದ ಮಹಿಳಾ ಕಲ್ಯಾಣ ಸಂಸ್ಥೆಯ ನಮ್ಮೂರ ಬಾನುಲಿ ಸಮುದಾಯ ರೇಡಿಯೋ ಕೇಂದ್ರದಲ್ಲಿ ಆಯೋಜಿಸಿದ್ದ ಜಾನಪದ ಕಲಾ ಮೇಳವನ್ನು ಉದ್ಘಾಟಿಸಿ ಮಾತನಾಡಿದರು. ಸ್ಥಳೀಯ ಕಲೆ ಹಾಗೂ ಸಂಸ್ಕೃತಿಗೆ ಉತ್ತೇಜನ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರೇಡಿಯೋ ಕೇಂದ್ರದ ಸಂಯೋಜಕ ಚೇತನ ಕುಲಕರ್ಣಿ ಮಾತನಾಡಿ ಡಿಜಿಟಲ್ ಯುಗದಲ್ಲಿ ಯುವಪೀಳಿಗೆ ಹೆಚ್ಚಾಗಿ ಪರದೆಗಳಿಗೆ ಸೀಮಿತವಾಗುತ್ತಿರುವುದರಿಂದ ಜನಪದ ಕಲೆಗಳತ್ತ ಆಸಕ್ತಿ ಕಡಿಮೆಯಾಗುತ್ತಿದೆ.
ಗ್ರಾಮೀಣ ಸಂಸ್ಕೃತಿ, ಜನಪದ ಕಥನ ಪರಂಪರೆಗಳು ನಿಧಾನವಾಗಿ ಮಂಕಾಗುತ್ತಿವೆ. ಈ ಅಮೂಲ್ಯ ಕಲೆಗಳನ್ನು ಉಳಿಸಲು ನಮ್ಮೂರ ಬಾನುಲಿ ವೇದಿಕೆ ಕಲ್ಪಿಸುತ್ತಿದೆ ಎಂದರು. ವಿವಿಧ ಗ್ರಾಮಗಳಿಂದ ಆಗಮಿಸಿದ ಹತ್ತಕ್ಕೂ ಹೆಚ್ಚು ಕಲಾತಂಡಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಜನಪದ ಗೀತೆ, ಹಂತಿ ಪದ, ಲಾವಣಿ, ಏಕಪಾತ್ರಾಭಿನಯ, ಹಾಡು ಹಾಗೂ ನೃತ್ಯ ಪ್ರದರ್ಶನಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಪ್ರತಿಯೊಂದು ತಂಡವೂ ತಮ್ಮದೇ ಆದ ವೈಶಿಷ್ಟ್ಯಪೂರ್ಣ ಶೈಲಿಯಲ್ಲಿ ಪ್ರದರ್ಶನ ನೀಡಿ ಗ್ರಾಮೀಣ ಸಂಸ್ಕೃತಿಯ ವೈಭವವನ್ನು ಪರಿಚಯಿಸಿತು. ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಕೊನೆಗೆ ಮಹಾಂತೇಶ ವಂದಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 