ಅಕ್ರಮವಾಗಿ ಪಡಿತರ ಧಾನ್ಯ ಸಾಗಾಟ ಆಹಾರ ಇಲಾಖೆ ದಾಳಿ
Food Department raids illegal transportation of ration grains
ಅಕ್ರಮವಾಗಿ ಪಡಿತರ ಧಾನ್ಯ ಸಾಗಾಟ ಆಹಾರ ಇಲಾಖೆ ದಾಳಿ
ವಿಜಯಪುರ, ಸೆಪ್ಟೆಂಬರ್ 15 : ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ವಿಜಯ ಟೈಯರ್ಸ್ ಹತ್ತಿರ ಸೆ.13ರಂದು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಖಚಿತ ಮಾಹಿತಿ ಮೇರೆಗೆ ಸೋಲಾಪುರ ರಾಷ್ಟ್ರೀಯ ಹೆದ್ದಾರಿ ವಿಜಯ ಟೈಯರ್ಸ್ ಹತ್ತಿರ ತಡೆದು ವಿಚಾರಿಸಿ, ಒಟ್ಟು 210 ಕ್ವಿಂಟಲ್ 43 ಕೆಜಿ ರೂ 4,76,310 ಮೌಲ್ಯದ ಪಡಿತರ ಧಾನ್ಯ ಜಪ್ತಿ ಮಾಡಿ ಅಗತ್ಯ ವಸ್ತುಗಳ ಕಾಯ್ದೆ 1955ರ ಮೇರೆಗೆ ಆದರ್ಶನಗರ ಪೋಲಿಸ್ ಠಾಣೆಯಲ್ಲಿ ಗಜಾನನ ಮಕಾಲೆ ಎನ್ನುವವರ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಈ ದಾಳಿಯಲ್ಲಿ ವಿಜಯಪುರ ನಗರದ ಆಹಾರ ನೀರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ, ಆದರ್ಶನಗರ ಪಿಎಸ್ಐ ಸೀತಾರಾಮ ಲಮಾಣಿ ಸೇರಿದಂತೆ ಪೋಲಿಸ್ ಹಾಗೂ ಆಹಾರ ಇಲಾಖೆಯ ಸಿಬ್ಬಂದಿ ಈ ದಾಳಿಯಲ್ಲಿ ಇದ್ದರು ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 