ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆ
Formation of Executive Committee of District Agricultural Society
ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆ
ಕೊಪ್ಪಳ 09: ಜಂಟಿ ಕೃಷಿ ನಿರ್ದೇಶಕರ ಕಛೇರಿಯ ಸಭಾಂಗಣದಲ್ಲಿ ಗುರುವಾರ ಕೊಪ್ಪಳ ಜಿಲ್ಲಾ ಕೃಷಿಕ ಸಮಾಜದ 2025-26 ರಿಂದ 2029-30ನೇ ಸಾಲಿನ ವರೆಗೆ 5 ವರ್ಷದ ಅವಧಿಗೆ ಚುನಾವಣೆ ನಡೆಸಲಾಗಿದ್ದು, ಜಿಲ್ಲಾ ಕೃಷಿಕ ಸಮಾಜದ ಕಾರ್ಯಕಾರಿ ಸಮಿತಿ ರಚನೆಯಾಗಿದೆ.
ಚುನಾವಣೆ ಅಧಿಕಾರಿಯಾಗಿ ಕೊಪ್ಪಳ ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್ ಅವರು ಚುನಾವಣೆ ಪ್ರಕ್ರಿಯೆ ಕೈಗೊಂಡರು. ಈ ಚುನಾವಣೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಕುಷ್ಟಗಿ ತಾಲ್ಲೂಕಿನ ಗುಮಗೇರ ಗ್ರಾಮದ ಶೇಖರಗೌಡ ವಿರುಪಾಕ್ಷಗೌಡ ಮಾಲಿಪಾಟೀಲ, ಜಿಲ್ಲಾ ಉಪಾಧ್ಯಕ್ಷರಾಗಿ ಕನಕಗಿರಿಯ ಸಂಗಪ್ಪ ತಂದೆ ಹಂಪಣ್ಣ, ಪ್ರಧಾನ ಕಾರ್ಯದರ್ಶಿಯಾಗಿ ಕಾರಟಗಿ ತಾಲ್ಲೂಕಿನ ಬೆನ್ನೂರು ಗ್ರಾಮದ ಎಂ.ಚಂದ್ರಶೇಖರಗೌಡ ತಂದೆ ಅಯ್ಯನಗೌಡ, ಖಜಾಂಚಿಯಾಗಿ ಗಂಗಾವತಿ ತಾಲ್ಲೂಕಿನ ಹೇರೂರು ಗ್ರಾಮದ ಅಮರೇಶಪ್ಪ ತಂದೆ ಶಿವಪ್ಪ ಗೋನಾಳ ಹಾಗೂ ರಾಜ್ಯ ಪ್ರತಿನಿಧಿಯಗಿ ಕುಕನೂರ ತಾಲ್ಲೂಕಿನ ತಳಕಲ್ ಗ್ರಾಮದ ಶಿವಪ್ಪ ಗೂಳರಡ್ಡಿ ಮೂಲಿಮನಿ ಇವರು ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಕೊಪ್ಪಳ ಜಂಟಿ ಕೃಷಿ ನಿರ್ದೇಶಕರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 