ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ
Kumaraswamy
ಬೆಂಗಳೂರು, ಡಿ 4-ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.
ಹವಾಮಾನ ವೈಪರೀತ್ಯದಿಂದ ಹಾಗೂ ಚುನಾವಣಾ ಪ್ರಚಾರಗಳಲ್ಲಿ ಸತತ ತೊಡಗಿಸಿಕೊಂಡಿದ್ದರಿಂದ ಜ್ವರ, ನೆಗಡಿ ಕೆಮ್ಮು ಉಂಟಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಭಾಗಿಯಾಗಿದ್ದಾಗಲೇ ಗಂಟಲು ಕೆರೆತ ಹಾಗೂ ಶೀತವುಂಟಾಗಿತ್ತು. ವಿಶ್ರಾಂತಿರಹಿತ ಸುತ್ತಾಟ, ಭಾಷಣದಿಂದ ಜ್ವರ ಹೆಚ್ಚಾಗಿದ್ದು, ಜಯದೇವ ಆಸ್ಪತ್ರೆಯಲ್ಲಿ ವೈದ್ಯರಿಂದ ಬುಧವಾರ ತಪಾಸಣೆಗೊಳಗಾದರು. ಸುಮಾರು ಅರ್ಧಗಂಟೆ ಕುಮಾರಸ್ವಾಮಿ ಅವರನ್ನು ಪರಿಶೀಲಿಸಿದ ವೈದ್ಯರು ನಾಲ್ಕು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ಅವರು ತಮ್ಮ ಜೆ.ಪಿ ನಗರದ ನಿವಾಸಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 