ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯ
Kumaraswamy
ಬೆಂಗಳೂರು, ಡಿ 4-ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿಗೆ ಅನಾರೋಗ್ಯವುಂಟಾಗಿದೆ.
ಹವಾಮಾನ ವೈಪರೀತ್ಯದಿಂದ ಹಾಗೂ ಚುನಾವಣಾ ಪ್ರಚಾರಗಳಲ್ಲಿ ಸತತ ತೊಡಗಿಸಿಕೊಂಡಿದ್ದರಿಂದ ಜ್ವರ, ನೆಗಡಿ ಕೆಮ್ಮು ಉಂಟಾಗಿದೆ. ಕಳೆದ ಮೂರು ದಿನಗಳ ಹಿಂದೆಯೇ ಚಿಕ್ಕಬಳ್ಳಾಪುರ ಪ್ರಚಾರದಲ್ಲಿ ಭಾಗಿಯಾಗಿದ್ದಾಗಲೇ ಗಂಟಲು ಕೆರೆತ ಹಾಗೂ ಶೀತವುಂಟಾಗಿತ್ತು. ವಿಶ್ರಾಂತಿರಹಿತ ಸುತ್ತಾಟ, ಭಾಷಣದಿಂದ ಜ್ವರ ಹೆಚ್ಚಾಗಿದ್ದು, ಜಯದೇವ ಆಸ್ಪತ್ರೆಯಲ್ಲಿ ವೈದ್ಯರಿಂದ ಬುಧವಾರ ತಪಾಸಣೆಗೊಳಗಾದರು. ಸುಮಾರು ಅರ್ಧಗಂಟೆ ಕುಮಾರಸ್ವಾಮಿ ಅವರನ್ನು ಪರಿಶೀಲಿಸಿದ ವೈದ್ಯರು ನಾಲ್ಕು ದಿನ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ವೈದ್ಯಕೀಯ ತಪಾಸಣೆ ಬಳಿಕ ಅವರು ತಮ್ಮ ಜೆ.ಪಿ ನಗರದ ನಿವಾಸಕ್ಕೆ ಮರಳಿದ್ದಾರೆ ಎಂದು ಮೂಲಗಳು ತಿಳಿಸಿವೆ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 