ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ: ವೃದ್ಧಾಶ್ರಮದಲ್ಲಿ ಅನ್ನದಾನ
Former students pay tribute to teachers: Food distribution at old age home
ಹಳೆ ವಿದ್ಯಾರ್ಥಿಗಳಿಂದ ಗುರುಗಳಿಗೆ ಸನ್ಮಾನ: ವೃದ್ಧಾಶ್ರಮದಲ್ಲಿ ಅನ್ನದಾನ
ಬಳ್ಳಾರಿ 15: ನಗರದ ವಾರ್ಡ್ಲಾ ಪದವಿ ಪೂರ್ವ ಕಾಲೇಜಿನ 1994 ಬ್ಯಾಚ್ ವಾಣಿಜ್ಯ ವಿಭಾಗದ ಹಳೇ ವಿದ್ಯಾರ್ಥಿಗಳ ಪುನರ್ ಸಂಘಟಿಸಿದ್ದಾರೆ. ಈ ಸಂದರ್ಭದಲ್ಲಿ ಕಾಲೇಜಿನ ತಮ್ಮ ಹಳೆಯ ನೆನಪುಗಳನ್ನು ಮೆಲಕು ಹಾಕಲಾಯಿತು. ತಮಗೆ ವಿದ್ಯಾ ಬುದ್ಧಿಗಳನ್ನು ಕಲಿಸಿದ ಗುರುಗಳನ್ನು ಸನ್ಮಾನಿಸಲಾಯಿತು. ಎರಡು ದಿನಗಳ ಕಾಲ ನಡೆದ ಈ ಕಾರ್ಯಕ್ರಮದಲ್ಲಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ನಿರಾಶ್ರಿತರಿಗೆ ಬೆಡ್ಶೀಟ್ಗಳನ್ನು ವಿತರಿಸಲಾಯಿತು. ವೃದ್ಧಾಶ್ರಮದಲ್ಲಿ ಅನ್ನದಾನ ನಡೆಸಲಾಯಿತು. ಈ ಸಂದರ್ಭದಲ್ಲಿ ಅಂದಿನ ವಾಣಿಜ್ಯ ವಿಭಾಗದ ಉಪನ್ಯಾಸಕರಾದ ರಾಜಶೇಖರ್ ಮಾತನಾಡುತ್ತಾ, ವಿದ್ಯಾರ್ಥಿಗಳ ಏಳಿಗೆಗೆ ಇದೇ ನಿಜವಾದ ಗುರವಂದನಾ ಕಾರ್ಯಕ್ರಮ ಎಂದು ಅಭಿನಂದಿಸಿದರು. ವಿಕ್ಟರ್, ದ್ವಾರಕಬಾಯಿ, ಪ್ರಹ್ಲಾದ ಚೌಧರಿ ಉಪನ್ಯಾಸಕರನ್ನು ಈ ಸಂದರ್ಭದಲ್ಲಿ ಅಭಿನಂದಿಸಿದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಹಳೆಯ ವಿದ್ಯಾರ್ಥಿಗಳಾದ ಬಿ.ಪಿ.ಸತೀಶ್, ಬಿಲ್ವರಾಜೇಶ್, ಸುಕುಮಾರ್, ಕವಿತ, ಗೌರಿ, ನಾಗರಾಜ್, ಗೀತ, ಸಂತೋಷ್, ಶೋಭಾ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 