ಉಚಿತ ಗಿರಿಜಾ ಕೋಳಿ ಮರಿ ವಿತರಣೆ
ಲೋಕದರ್ಶನ ವರದಿ
ರಾಯಬಾಗ 05: ರೈತರು ಉಪಕಸುಬವನ್ನಾಗಿ ಕೋಳಿಗಳನ್ನು ಸಾಕಾಣಿಕೆ ಮಾಡುವುದರಿಂದ ತಮ್ಮ ಉಪಜೀವನಕ್ಕೆ ಅನುಕೂಲವಾಗುತ್ತದೆ. ಬಡಜನರಿಗೆ ಅನುಕೂಲವಾಗಲು ಉಚಿತವಾಗಿ ಕೋಳಿಗಳನ್ನು ನೀಡಲಾಗುತ್ತಿದೆ ಎಂದು ಜಿ.ಪಂ.ಸದಸ್ಯೆ ಜಯಶ್ರೀ ಮೊಹಿತೆ ಹೇಳಿದರು.
ದಿ.04ರಂದು ತಾಲೂಕಿನ ಜಲಾಲಪೂರ ಗ್ರಾಮದಲ್ಲಿ ಜಿ.ಪಂ. ಯೋಜನೆಯಡಿಯಲ್ಲಿ ಬಾವನ ಸೌಂದತ್ತಿ ಜಿ.ಪಂ. ವ್ಯಾಪ್ತಿಯ ಬಾವನಸೌಂದತ್ತಿ, ಯಡ್ರಾಂವ, ದಿಗ್ಗೇವಾಡಿ, ಜಲಾಲಪೂರ, ಭಿರಡಿ, ಬೆಕ್ಕೇರಿ ಗ್ರಾಮದ 75 ಜನ ಫಲಾನುಭವಿಗಳಿಗೆ ಉಚಿತವಾಗಿ 750 ಗಿರಿಜಾ ಕೋಳಿ ಮರಿಗಳನ್ನು ವಿತರಿಸಿ ಅವರು ಮಾತನಾಡಿದರು.
ಮಹಾವೀರ ಮೋಹಿತೆ, ತಾ.ಪಂ.ಸದಸ್ಯ ನಾಮದೇವ ಕಾಂಬಳೆ, ಗಣೇಶ ಮೋಹಿತೆ, ಶಾಂತಗೌಡ ಪಾಟೀಲ, ಡಾ.ಪ್ರಮೋದ ತಳವಾರ, ದಿಲೀಪ ಜಮಾದಾರ, ವಿಠ್ಠಲ ಬಂಡಗಾರ, ಎಮ್.ಎನ್.ಸಲಗರೆ, ಗಂಗಾಧರ ಕಾಂಬಳೆ, ಅಜರ್ುನ ಬಂಡಗರ, ಮಹೇರಅಲಿ ಜಮಾದಾರ, ಆನಂದ ಚೌಗುಲಾ, ಸಂಜು ಚೌಗಲಾ, ಮಾರುತಿ ಕಾಂಬಳೆ, ವಿಲಾಸ ಹೆರವಾಡೆ, ಅಣ್ಣಾಸಾಬ ಕೊಣೆ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 