ಉಚಿತ ಕ್ಷೌರ ಸೇವಾ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ31 : ಯಾವುದೇ ಸಮಾಜ ಸೇವೆಯಾಗಲಿ ಅದು ಪ್ರತಿಫಲಾಪೇಕ್ಷೇ ಇಲ್ಲದ ಸೇವೆಯಾದಾಗ ಮಾತ್ರ ಉತ್ತಮ ಸಮಾಜ ಸೇವೆ ಎನಿಸಿಕೊಳ್ಳುತ್ತದೆ ಆ ನಿಟ್ಟಿನಲ್ಲಿ ತಾಲೂಕಾ ಹಡಪದ ಸಮಾಜ ಕಾಯರ್ೋನ್ಮುಖವಾಗಿದೆ ಎಂದು ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಬಸವರಾಜ ಹಡಪದ ಹೇಳಿದರು.
ತಾಲೂಕಿನ ಬಿಸನಳ್ಳಿಯ ಜಗದ್ಗುರು ವೇಧ, ಆಗಮ, ಸಂಸ್ಕೃತ, ಸಂಗೀತ ಹಾಗೂ ಯೋಗ ಪಾಠ ಶಾಲೆಯ ಸುಮಾರು 80 ಕ್ಕೂ ಹೆಚ್ಚು ವಟುಗಳಿಗೆ ತಾಲೂಕಾ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ವತಿಯಿಂದ ಉಚಿತ ಕ್ಷೌರ ಸೇವಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಾವು ಮಾಡುವ ಸೇವೆ ನಿಶ್ವಾರ್ಥದಿಂದ ಕೂಡಿರಬೇಕು. ಇಂದು ಸಮಾಜ ಸೇವೆಯನ್ನು ಹಲವಾರು ಜನರು ಮಾಡುತ್ತಾರೆ ಅದರಲ್ಲಿ ಪ್ರತಿಫಲಾಪೇಕ್ಷೇ ಇಲ್ಲದೇ ಮಾಡುವ ಸೇವಾ ಮನೋಭಾವದ ಜನ ಬಹಳ ವಿರಳ ಅಂತಹ ಸೇವೆಯನ್ನು ನಮ್ಮ ಸಮಾಜ ಮಾಡಿದೆ ಎಂದು ಭಾವಿಸಿರುವೆ ಎಂದರು.
ಸಮಾಜದ ಉಪಾದ್ಯಕ್ಷ ಮುತ್ತುರಾಜ ಕ್ಷೌರದ ಮಾತನಾಡಿ ವೃತ್ತಿಯಲ್ಲಿ ಕಾಯಕ ನಿಷ್ಠೆಯ ಸಮಾಜ ಹಡಪದ ಸಮಾಜವಾಗಿದ್ದು ಈ ಸೇವಾ ಕಾರ್ಯ ನಮಗೆ ತೃಪ್ತಿಯ ಜೊತೆಗೆ ಸಮಾಜ ಸೇವೆ ಮಾಡಲು ಪ್ರೇರೇಪಿಸಿದೆ ಎಂದರು.
ಇದೇ ಸಂದರ್ಭದಲ್ಲಿ ಫೀಠದ ಸುಮಾರು 80 ಕ್ಕೂ ಹೆಚ್ಚು ವಟುಗಳಿಗೆ ಉಚಿತವಾಗಿ ಕ್ಷೌರ ಸೇವೆ ನಡೆಯಿತು.
ಹಡಪದ ಅಪ್ಪಣ್ಣ ಸಮಾಜದ ಹಿರಿಯರಾದ ಶಿವಾನಂದ ಕಟ್ಟಿಮನಿ, ಜಿಲ್ಲಾ ಸಮೀತಿ ಸದಸ್ಯ ಶಿವಕುಮಾರ ಮಡ್ಲಿಕರ, ತಾಲೂಕಾ ಪ್ರಧಾನ ಕಾರ್ಯದಶರ್ಿ ಮಲ್ಲಿಕಾಜರ್ುನ ಹಡಪದ, ಖಜಾಂಚಿ ಶಿವರಾಜ ಕ್ಷೌರದ ಸೇರಿದಂತೆ ಸಮಾಜದ ಮುಖಂಡರು ಹಾಜರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 