ಉಚಿತ ಆರೋಗ್ಯ ಶಿಬಿರ
ಲೋಕದರ್ಶನ ವರದಿ
ಬೆಳಗಾವಿ 22: ಕೆಎಲ್ಎಸ್ ಗೋಗಟೆ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸ್ವಾಮಿ ವಿವೇಕಾನಂದ ಜಯಂತೊತ್ಸವದ ಅಂಗವಾಗಿ ದಿ.21ರಂದು ವಾಯ್. ಆರ್. ಸಿ, ಎನ್.ಎಸ್.ಎಸ್. ಹಾಗೂ ಎನ್. ಸಿ. ಸಿ. ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ಶಿಬಿರವನ್ನು ಏರ್ಪಡಿಸಲಾಗಿತ್ತು. ಈ ಶಿಬಿರಕ್ಕೆ ಕೆ. ಎಲ್. ಇ ಯ ಪರಿಣಿತ ವೈದ್ಯರು ಆಗಮಿಸಿದ್ದರು. ನಮ್ಮ ಮಹಾವಿದ್ಯಲಯದ ಸುಮಾರು 90ಕ್ಕೂ ಹೆಚ್ಚು ವಿದ್ಯಾಥರ್ಿಗಳು ರಕ್ತದಾನ ಮಾಡಿದರು.
ಅಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ರಾಮಕೃಷ್ಣ ಆಶ್ರಮದ ಸ್ವಾಮಿ ನವದುಗರ್ಾನಂದರು ಆಗಮಿಸಿದ್ದರು. ಅವರು ತಮ್ಮ ಭಾಷಣದಲ್ಲಿ ವಿದ್ಯಾಥರ್ಿಗಳು ದೈಹಿಕ ಆಕರ್ಷಣೆಗೆ ಒಳಗಾಗದೆ ಉತ್ತಮ ವ್ಯಕ್ತತ್ವವನ್ನು ಬೆಳೆಸಿಕೊಳ್ಳುವತ್ತ ಪ್ರಯತ್ನಿಸಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಚ್.ಎಚ್. ವೀರಾಪೂರವರು ವಹಿಸಿದ್ದರು. ಅವರು ರಕ್ತದಾನದ ಮಹತ್ವ ಹಾಗೂ ಅದರ ಪ್ರಯೋಜನಗಳ ಬಗ್ಗೆ ವಿವರಿಸಿದರು. ಈ ಕಾರ್ಯಕ್ರಮಕ್ಕೆ ಪ್ರೊ. ಗ್ಯಾಮಾನಾಯಿಕ ಎಚ್. ,ಡಾ.ಎಮ್.ಎಲ್. ಲಮಾಣಿ, ಪ್ರೊ. ಸರೀತಾ ಪಾಟೀಲ, ಪ್ರೊ. ಎ.ಆರ್.ನಿರಲ್ಕೇರಿ ಹಾಗೂ ಎಲ್ಲ ಉಪನ್ಯಾಸಕರು, ವಿದ್ಯಾಥರ್ಿಗಳು ಉಪಸ್ಥಿತರಿದ್ದು ಶೋಭೆಯನ್ನು ತಂದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 