ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ

ಯಶಸ್ವಿಯಾಗಿ ಜರುಗಿದ ಉಚಿತ ನೇತ್ರ ತಪಾಸಣಾ ಶಿಬಿರ Free eye check-up camp successfully held

ವಿಜಯಪುರ,ಜ.28: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಹಾಗೂ ಅನುಗ್ರಹ ಕಣ್ಣಿನ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ-2026 ಅಂಗವಾಗಿ ಹಮ್ಮಿಕೊಂಡ  ಉಚಿತ ನೇತ್ರ ತಪಾಸಣಾ ಶಿಬಿರ ಯಶಸ್ವಿಯಾಗಿ ಜರುಗಿತು.  ಕಾರ್ಯಕ್ರಮದಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಮಬಾಬಾ ಮುದ್ದೇಬಿಹಾಳ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಸಂತೋಷಗೌಡ ಬಿ.ಪಾಟೀಲ, ದತ್ತಾತ್ರೇಯ ಹೊಸಮಠ, ಅಲ್‌-ಅಮೀನ್ ವೈದ್ಯಕೀಯ ಕಾಲೇಜಿನ ಡಾ.ಆಶ್ಪಾಕ ಅಹ್ಮದ ಕಕ್ಕೇರಿ, ಹಿರಿಯ ಮೋಟಾರು ವಾಹನ ನೀರೀಕ್ಷಕ ಗೋವಿಂದ ಎಲ್‌.ರಾಠೋಡ ಭಾಗವಹಿಸಿದ್ದರು. ಈ ಶಿಬಿರದಲ್ಲಿ 101 ಸಾರ್ವಜನಿಕರಿಗೆ ಉಚಿತ ನೇತ್ರ ತಪಾಸಣೆ ನಡೆಸಲಾಯಿತು.