ಶ್ರೀನಿವಾಸ ಮಾನೆ ಅವರ 50 ನೇ ಜನ್ಮದಿನದ ಅಂಗವಾಗಿ ಉಚಿತ ನೇತ್ರ ತಪಾಸಣೆ
Free eye check-up on the occasion of Srinivasa Mane's 50th birthday
ಶ್ರೀನಿವಾಸ ಮಾನೆ ಅವರ 50 ನೇ ಜನ್ಮದಿನದ ಅಂಗವಾಗಿ ಉಚಿತ ನೇತ್ರ ತಪಾಸಣೆ
ಹಾನಗಲ್:ಶಾಸಕ ಶ್ರೀನಿವಾಸ ಮಾನೆ ಅವರ 50 ನೇ ಜನ್ಮ ವರ್ಷಾಚರಣೆ ಅಂಗವಾಗಿ ತಾಲೂಕಿನ ಅಕ್ಕಿಆಲೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹುಬ್ಬಳ್ಳಿಯ ಜಯಪ್ರಿಯ ಕಣ್ಣಿನ ಆಸ್ಪತ್ರೆ ಹಾಗೂ ಟೀಂ ಆಪತ್ಬಾಂಧವ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗಿತು.
ಶಿಬಿರದಲ್ಲಿ 150 ಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಂಡು ಈ ಪೈಕಿ 55 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಯಿತು. ಶಿಬಿರ ಉದ್ಘಾಟಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ ಮಾತನಾಡಿ, ಶಾಸಕ ಶ್ರೀನಿವಾಸ ಮಾನೆ ಅವರ 50 ನೇ ಜನ್ಮ ವರ್ಷಾಚರಣೆ ನೆಪದಲ್ಲಿ ವರ್ಷವೀಡೀ ಸಾಕಷ್ಟು ಸಮಾಜೋಪಯೋಗಿ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ, ಬೃಹತ್ ಆರೋಗ್ಯ ಶಿಬಿರ, ನೇತ್ರದಾನ, ದೇಹದಾನ, ಬೃಹತ್ ಉದ್ಯೋಗ ಮೇಳ, ಕೆರೆಗಳ ಪುನಶ್ಚೇತನ ಹೀಗೆ ನಾನಾ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಇತ್ತೀಚಿಗೆ ಹಾನಗಲ್ ನಗರದಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1196 ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಿದ್ದು ಇತಿಹಾಸ ಎಂದರು.
ಗ್ರಾಪಂ ಅಧ್ಯಕ್ಷ ಮಕ್ಬೂಲ್ಅಹ್ಮದ್ ರುಸ್ತುಂಖಾನವರ, ಸದಸ್ಯರಾದ ಇನಾಯತ್ ಪಠಾಣ, ಫಕ್ಕೀರಗೌಡ ಪಾಟೀಲ ಇಂದೂಧರ ಸಾಲಿಮಠ, ರಜಿಯಾಬೇಗಂ ಹಿತ್ತಲಮನಿ, ಅಲ್ಪಸಂಖ್ಯಾತ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತ್ತಾರಸಾಬ ಅರಳೇಶ್ವರ, ವೈದ್ಯಾಧಿಕಾರಿ ಡಾ.ಗಗನ ಮಾಳೋದೆ, ಜಯಪ್ರಿಯಾ ಕಣ್ಣಿನ ಆಸ್ಪತ್ರೆಯ ಮಹೇಶ ಕುಲಕರ್ಣಿ ಸೇರಿದಂತೆ ಅನೇಕರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 