ನಿಟಪಳ್ಳಿ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
Free health check-up camp in Nitapalli village
ರಾಣೆಬೆನ್ನೂರು 24: ಪ್ರತಿಯೊಬ್ಬರು ತಮ್ಮ ನಿತ್ಯ ಜೀವನ ಬದುಕಿನಲ್ಲಿ ಅತ್ಯಂತ ಸರಳ ಜೀವನ ಸಾಗಿಸಬೇಕಾದರೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ವಿಷಯವಿರಲಿ ನಿರ್ಲಕ್ಷತನ ತೋರದೆ ಮೇಲಿಂದ ಮೇಲೆ ತಪಾಸಣೆಗೊಳಪಡಬೇಕಾದ ಇಂದಿನ ಅಗತ್ಯವಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಮಂಜುನಾಥ ಗೌಡ ಹೇಳಿದರು. ಅವರು ತಾಲೂಕಿನ ನಿಟಪಳ್ಳಿ ಗ್ರಾಮದ ಕಾರ್ಯಕ್ಷೇತ್ರದಲ್ಲಿ ಎಸ್. ಕೆ.ಡಿ.ಆರ್. ಡಿ. ಪಿ. ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು. ವಯೋಮಿತಿಗನುಗುಣವಾಗಿ, ಇಂದು ಒಂದಿಲ್ಲ ಒಂದು ರೀತಿಯಲ್ಲಿ ಕಾಯಿಲೆಗಳು ಬರುವುದು ಸಹಜ.
ಅದಕ್ಕಾಗಿ ವಯೋವೃದ್ಧರು ಇಂತಹ ಶಿಬಿರಗಳಲ್ಲಿ ಭಾಗವಹಿಸಿ ತಪಾಸಣೆ ಮಾಡಿಕೊಂಡು, ವೈದ್ಯರ ಸಲಹೆಯಂತೆ ನಿಯಮಿತ ಆಹಾರ, ಉಪಹಾರ, ಓಷಧಿ ಮತ್ತು ನಿದ್ರೆ ಸರಿಯಾದ ರೀತಿಯಲ್ಲಿ ಅನುಸರಿಸಿದರೆ ಕಾಯಿಲೆಗಳಿಗೆ ಕಡಿವಾಣ ಹಾಕಿ, ಸರಳ ಜೀವನ ಸಾಗಿಸಬಹುದಾಗಿದೆ ಎಂದು ಕರೆ ನೀಡಿದರು. ಶಿಬಿರದಲ್ಲಿ ಸಾರತ್ತ್ಯ ವಹಿಸಿದ್ದ ಶಿವಂ ಆಸ್ಪತ್ರೆಯ ಡಾ. ಶಿವಕುಮಾರ, ವಿಮಾ ಸಮನ್ವಯಾಧಿಕಾರಿ, ಕೃಷ್ಣಮೂರ್ತಿ, ಆಸ್ಪತ್ರೆ ವ್ಯವಸ್ಥಾಪಕ ಚರಣಕುಮಾರ, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಶ್ರೀಮತಿ ಶೋಭಾ ಸೇವಾ ಪ್ರತಿನಿಧಿ ಶ್ರೀಮತಿ ಬಸಮ್ಮ ಸೇರಿದಂತೆ ಯೋಜನೆಯ, ಸದಸ್ಯರು ಮಹಿಳೆಯರು ವೈದ್ಯರು ಪಾಲ್ಗೊಂಡಿದ್ದರು. ಮಧ್ಯಾಹ್ನದವರೆಗೆ ನಡೆದ ಶಿಬಿರದಲ್ಲಿ 200 ನೂರಕ್ಕೂ ಹೆಚ್ಚು ಶಿಭಿರಾರ್ಥಿಗಳು ಪಾಲ್ಗೊಂಡು ತಪಾಸಣೆಗೆ ಒಳಪಟ್ಟರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 