ಬೆಳಗಾವಿ: ರೋಟರಿಯಿಂದ ಬಡ ಮಕ್ಕಳಿಗೆ ಉಚಿತ ಹೃದಯ ಶಸ್ತ್ರ ಚಿಕಿತ್ಸೆ
ಲೋಕದರ್ಶನ ವರದಿ
ಬೆಳಗಾವಿ 29: ಸರಕಾರದ ಯಾವುದೇ ಯೋಜನೆಯಿಂದಲೂ ಪ್ರಯೋಜನ ಪಡೆಯಲು ಸಾಧ್ಯವಾಗದಂತಹ ಬಡ ಮಕ್ಕಳಿಗೆ ಉಚಿತವಾಗಿ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲು ರೋಟರಿ ಕ್ಲಬ್ ನಿರ್ಧರಿಸಿದೆ. ರೋಟರಿ ಇಂಟರ್ ನ್ಯಾಶನಲ್ ಡಿಸ್ಟ್ರಿಕ್ಟ್ 3170 ಯೋಜನೆ ಜಾರಿಗೊಳಿಸುತ್ತಿದ್ದು, ಅಮೇರಿಕಾದ ರೋಟರಿ ಜಿಲ್ಲೆ 7255 ಸೇರಿದಂತೆ ವಿವಿಧ ಸಂಸ್ಥೆಗಳು ನೆರವು ನೀಡುತ್ತಿವೆ.
ಅಮೇರಿಕಾದ ರೋಟರಿ ಜಿಲ್ಲೆ 7255 ಗವರ್ನರ್ ರವಿ ಬೋಪಳಾಪುರ ಗುರುವಾರ ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ವಿವರ ನೀಡಿದರು. ವಿಶ್ವದ ನಾನಾ ಭಾಗಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತಿದ್ದು, ಮೊದಲ ಹಂತದಲ್ಲಿ ಈ ಭಾಗದ 20 ಬಡ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ. 2020 ಡಿಸೆಂಬರ್ ಹೊತ್ತಿಗೆ ದಿನಕ್ಕೊಂದು ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ನಡೆಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಬೆಳಗಾವಿಯಲ್ಲಿ ಕೆಎಲ್ಇ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತದೆ. ಮಕ್ಕಳನ್ನು ಆಯ್ಕೆ ಮಾಡಲು ವಿವಿಧೆಡೆ ಶಿಬಿರಗಳನ್ನು ಸಂಘಟಿಸಲಾಗುತ್ತದೆ ಎಂದೂ ಅವರು ತಿಳಿಸಿದರು. ಕೆಎಲ್ಇ ಆಸ್ಪತ್ರೆಯ ವೈದ್ಯಕೀಯ ನಿದರ್ೆಶಕ ಡಾ.ಎಂ.ವಿ.ಜಾಲಿ, ರೋಟರಿ ಕ್ಲಬ್ ಹಮ್ಮಿಕೊಂಡಿರುವ ಯೋಜನೆಯನ್ನು ಶ್ಲಾಘಿಸಿದರು. ಕೆಎಲ್ಇ ಆಸ್ಪತ್ರೆಯಲ್ಲಿ ಕಡಿಮೆ ಖಚರ್ಿನಲ್ಲಿ ಶಸ್ತ್ರ ಚಿಕಿತ್ಸೆ ಜೊತೆಗೆ ನಂತರದ ಉಪಚಾರವನ್ನು ಸಹ ನೀಡಲಾಗುತ್ತದೆ. ಯೋಜನೆಗೆ ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧ ಎಂದರು.
ಚೈತನ್ಯ ಕುಲಕಣರ್ಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರಕಾರದ ವಿವಿಧ ಯೋಜನೆಗಳಿಂದಲೂ ಲಾಭ ಪಡೆಯಲಾಗದವರು ರೋಟರಿ ಕ್ಲಬ್ ಸಂಪಕರ್ಿಸಬೇಕು. ಈ ಬಗ್ಗೆ ಶಿಬಿರಗಳನ್ನು ಆಯೋಜಿಸಲಾಗುತ್ತದೆ. ಪ್ರತಿ ಕುಟುಂಬದ ಸಾಮಾಜಿಕ ಮತ್ತು ಆಥರ್ಿಕ ಸ್ಥಿತಿ ಗತಿ ಅಧ್ಯಯನ ಮಾಡಿ ಸೌಲಭ್ಯಕ್ಕೆ ಆಯ್ಕೆ ಮಾಡಲಾಗುವುದು ಎಂದರು.
ಮೊದಲ ಹಂತದಲ್ಲಿ ಸುಮಾರು 37.39 ಲಕ್ಷ ರೂ. ವೆಚ್ಚದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತಿದೆ. 15 ವರ್ಷಕ್ಕಿಂತ ಕಡಿಮೆ ವಯೋಮಾನದವರು ಮಾತ್ರ ಅರ್ಹರಾಗುತ್ತಾರೆ. ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಾರೆ ಎಂದು ಅವರು ಹೇಳಿದರು. ಜಯಸಿಂಹ ಬೆಳಗಲ್ ಸ್ವಾಗತಿಸಿದರು. ಆನಂದ ಕುಲಕಣರ್ಿ, ಸುಜಾತಾ ಜಾಲಿ, ಆನಂದ ಬುಕ್ಕೆಬಾಗ್, ಮನೋಜ ಸುತಾರ್, ಸತೀಶ್ ಕುಲಕಣರ್ಿ, ನೀಲೇಶ್ ಪಾಟೀಲ್, ಕೆಎಲ್ಇ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.
ಹೆಚ್ಚಿನ ಮಾಹಿತಿಗೆ ಚೈತನ್ಯ ಕುಲಕಣರ್ಿ (9341101797), ಡಾ.ಮನೋಜ ಸುತಾರ (9448634116) ಡಾ.ಸುಜಾತಾ ಜಾಲಿ (9845688999), ಜಯಸಿಂಹ್ ಬೆಳಗಲ್ (7353491776), ಆನಂದ ಬುಕ್ಕೆಬಾಗ್ (9632631630), ನೀಲೇಶ್ ಪಾಟೀಲ (9845744262) ಸಂಪಕರ್ಿಸಬಹುದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 