ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ

ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ Free mobile repair service camp

 

ರುಡ್‌ಸೆಟ್ ಸಂಸ್ಥೆ, ಧಾರವಾಡದಲ್ಲಿ ಮೊಬೈಲ್ ರಿಪೇರಿ ತರಬೇತಿ ಪಡೆಯುತ್ತಿರುವ ಶಿಬಿರಾರ್ಥಿಗಳಿಂದ ಧಾರವಾಡದ ಜೆಎಸ್‌ಎಸ್ ಕಾಲೇಜು ಆವರಣದಲ್ಲಿ “ಉಚಿತ ಮೊಬೈಲ್ ರಿಪೇರಿ ಸೇವಾ ಶಿಬಿರ ” ವನ್ನು ದಿ. 22ರಂದು ಧಾರವಾಡದ ಜೆ.ಎಸ್‌.ಎಸ್ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.  

ಜೆಎಸ್‌ಎಸ್ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಅಜಿತಪ್ರಸಾದ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಶಿಬಿರದ ಉದ್ಘಾಟನೆ ಮಾಡಿದ ಅವರು ಮೊಬೈಲ್ ಕ್ಷೇತ್ರಕ್ಕೆ ತುಂಬಾ ಬೇಡಿಕೆಯಿದ್ದು ಇದರ ಸದುಪಯೋಗ ಮಾಡಿಕೊಳ್ಳಿ ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು. ಜೊತೆಗೆ ಈ ಶಿಬಿರವನ್ನು ಆಯೋಜಿಸಿದ ರುಡ್‌ಸೆಟ್ ಸಂಸ್ಥೆಯ ಕಾರ್ಯವನ್ನು ಅವರು ಶ್ಲಾಘಿಸಿದರು.  

ಈ ಸಂದರ್ಭದಲ್ಲಿ ಅರಿಹಂತ ಪ್ರಸಾದ್, ಮಹಾವೀರ ಉಪಾಧ್ಯೆ, ಸಂಜಯ್ ಕಪಟ್ಕರ್, ರುಡ್‌ಸೆಟ್ ಸಂಸ್ಥೆಯ ಸಿಬ್ಬಂದಿಗಳು, ತರಬೇತಿದಾರರು ಭಾಗವಹಿಸಿದ್ದರು. ಈ ಶಿಬಿರದಲ್ಲಿ ನೂರಾರು ಗ್ರಾಹಕರು ತಮ್ಮ ಮೊಬೈಲ್ ಸೆಟ್‌ಗಳನ್ನು ಉಚಿತವಾಗಿ ರಿಪೇರಿ ಮಾಡಿಸಿದರು. ಈ ಶಿಬಿರವು ಗ್ರಾಹಕರ ಸಂತೃಪ್ತಿಗೆ ಕಾರಣವಾಯಿತು.