ರಾಕ್ ಗಾರ್ಡನ್ನಲ್ಲಿ ಸ್ನೇಹಕೂಟ ಸಮಾರಂಭ
ಲೋಕದರ್ಶನ ವರದಿ
ಶಿಗ್ಗಾವಿ10: ಪರಿಶ್ರಮ ಯಶಸ್ಸಿನ ಮೆಟ್ಟಿಲು. ಶ್ರಮಿಕರಿಗೆ ಚೈತನ್ಯ ತುಂಬಲು ಅವರೊಂದಿಗೆ ಒಂದು ದಿನ ಸಂತಸದಿಂದ ಕಳೆಯಬೇಕು. ಇದು ಅಭಿವೃದ್ಧಿಗೆ ಪೂರಕ ಎಂದು ಹಿರೇಕೆರೂರಿನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಯ ಯೋಜನಾಧಿಕಾರಿ ಮೋಹನ ನಾಯಕ್ ಹೇಳಿದರು.
ಗೊಟಗೋಡಿ ಉತ್ಸವ ರಾಕ್ ಗಾರ್ಡನ್ನ ಜಾನಪದ ರಂಗಮಂದಿರದಲ್ಲಿ ಶನಿವಾರ ಸಂಜೆ ನಡೆದ ಸ್ನೇಹಕೂಟ ಸಮಾರಂಭವನ್ನು ಉದ್ಘಾಟಿಸಿದರು.
ಸ್ನೇಹಕೂಟ ಎಂದರೆ ಒಗ್ಗಟ್ಟಿನ ಸಂಕೇತ ಇಲ್ಲಿ ಎಲ್ಲರೂ ಒಂದೇ ನಮಗೆ ಗೊತ್ತಿರದ ವಿಷಯಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರೆ ನಿಗದಿತ ಗುರಿ ತಲುಪಲು ಸಹಕಾರಿ ಆಗುತ್ತದೆ ಅಲ್ಲದೆ ಉತ್ಸವ ರಾಕ್ ಗಾರ್ಡನ್ ಹೆಸರಿಗೆ ತಕ್ಕಂತೆ ಎಲ್ಲರಲ್ಲೂ ಹೊಸ ಚೈತನ್ಯ ತುಂಬುತ್ತದೆ ಎಂದ ಮೋಹನ ನಾಯಕ್,ಇದು ಕಲೆ,ಸಂಸ್ಕೃತಿಯ ಬೀಡು ಎಂದರು.
ರಾಜೇಶ್ ಮಾತನಾಡಿ, ಸ್ನೇಹಕೂಟ ನಾವೆಲ್ಲರೂ ಎಂಬ ಭಾವನೆ ಮೂಡಿಸಿತಲ್ಲದೆ ಹೊಸ ಉತ್ಸವ ತುಂಬಿತು ಎಂದರು.
ಯೋಜನೆಯ ಕಾರ್ಯಕರ್ತರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಸ್ನೇಹಕೂಟ ಅಂಗವಾಗಿ ಏರ್ಪಡಿಸಿದ ಕ್ರೀಡಾಕೂಟದ ವಿಜೇತರಿಗೆ ಯೋಜನಾಧಿಕಾರಿ ಮೋಹನ ನಾಯಕ್ ಬಹುಮಾನ ವಿತರಿಸಿದರು.
ಮಮತಾ, ರಟ್ಟಿಹಳ್ಳಿ, ಮಾಸುರು ವಲಯಗಳ ಮೇಲ್ವಿಚಾರಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಕೃಷಿ ಅಧಿಕಾರಿ ಅಣ್ಣಪ್ಪ ಸ್ವಾಗತಿಸಿದರು. ಮೇಲ್ವಿಚಾರಕ ನಟರಾಜ ವಂದಿಸಿದರು.
ಅಂಬೋಲಿ ಬಳಿ ಕಣಿವೆಗೆ ಬಿದ್ದು ಯುವಕ ದುರ್ಮರಣ : 5 ಗಂಟೆ ಕಾರ್ಯಾಚರಣೆ ಬಳಿಕ ಶವ ಪತ್ತೆ
ಸುತಗಟ್ಟಿ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಸೆರೆ : ನಿಟ್ಟೂಸಿರು ಬಿಟ್ಟ ಗ್ರಾಮಸ್ಥರು
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ 