ರೈತರು, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಜಿ.ರಾಮ್.ಜಿ ಈ ಯೋಜನೆ ಜಾರಿಗೆ
G.Ram.Ji implemented this scheme to benefit farmers and agricultural workers
ಗದಗ 12: ಮೋದಿ ನೇತೃತ್ವದ ಕೇಂದ್ರ ಸರಕಾರ ಲೋಕಸಭೆಯಲ್ಲಿ ಮಂಡಿಸಿ ನಂತರ ರಾಜ್ಯ ಸಭೆಯಲ್ಲಿ ಮಂಡಿಸಿ ಈ ಹಿಂದೆ ಇದ್ದ ಮನರೇಗಾ ಯೋಜನೆಯ ಲೋಪದೋಷ ಸರಿಪಡಿಸಿ ರೈತರಿಗೆ, ಕೃಷಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಈ ಯೋಜನೆ ಜಾರಿಗೆ ತಂದಿದ್ದು, ಜಿ.ರಾಮ್.ಜಿ ಕಾಯ್ದೆ ಜಾರಿಗೋಳಿಸಿದ್ದು ಸ್ವಾಗತಾರ್ಹ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ. ಸಿ ಪಾಟೀಲ ತಿಳಿಸಿದರು.
ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಹಿಂದೆ ಮನರೇಗಾ ಯೋಜನೆಯ ಹಣ ವಿಳಂಬವಾಗುತ್ತಿತ್ತು. ಕಾಯ್ದೆ ತಿದ್ದುಪಡಿ ಆದ ನಂತರ ವಿಳಂಬವಾಗುವುದಿಲ್ಲ. ಸಿದ್ದರಾಮಯ್ಯ ಈ ಕಾಯ್ದೆಯನ್ನು ವಿರೋಧ ಮಾಡುತ್ತಾರೆ. ತಮ್ಮ ಸರ್ಕಾರದ ಹುಳುಕು ಹೊರಬರುತ್ತದೆ ಎನ್ನುವ ಭಯ ಅವರಲ್ಲಿ ಕಾಡುತ್ತಿದೆ. ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿ, ಅನುಮೊದನೆ ಪಡೆದು, ರಾಜ್ಯ ಸಭೆಯಲ್ಲಿಯೂ ಮಂಡಿಸಿ ಅನುಮೊದನೆ ಪಡೆದು ತಿದ್ದುಪಡಿ ಮಾಡಲಾಗಿದೆ ಎಂದರು.
ಇದೇ ವೇಳೆ ವಿಧಾನ ಪರಿಯತ್ ಸದಸ್ಯ ಎಸ್. ವ್ಹಿ ಸಂಕನೂರ ಮಾತನಾಡಿ, ಮನರೇಗಾ ಯೋಜನೆಯ ಲೋಪದೋಷ ಗುರುತಿಸಿ ವಿಕಸಿತ ಭಾರತ ಕಾಯ್ದೆ ಜಾರಿಗೆ ತರಲಾಗಿದೆ. ಮನರೇಗಾ ದಿಂದ ಭ್ರಷ್ಟಾಚಾರ ಮಾಡಲು ಅನೂಕೂಲವಾಗುತ್ತಿತ್ತು. ರೈತರು ಬಿತ್ತನೆ ಮಾಡುವ ಸಮಯದಲ್ಲಿ ಮನರೇಗಾ ಕಾರ್ಯ ಆರಂಭವಾಗುತ್ತಿತ್ತು. ನೂತನ ಕಾಯ್ದೆಯಿಂದ 60 ದಿನಗಳ ಕಾಲ ಕಡ್ಡಾಯವಾಗಿ ರಜೆ ನೀಡಬೇಕು ಅಂತ ವಿವರಿಸಿದರು.
ಪಂಚಾಯತ್ ರಾಜ್ ವ್ಯವಸ್ಥೆಯ ಅಧಿಕಾರ ಮೊಟಕುಗೊಳಿಸಲಾಗುತ್ತದೆ ಅಂತ ಕಾಂಗ್ರೆಸ್ ಆರೋಪ ಮಾಡುತ್ತಿದೆ. ಇದು ಶುದ್ದ ಸುಳ್ಳು. ನೀರಿನ ಸುರಕ್ಷತೆ ಕಾಮಗಾರಿ, ಗ್ರಾಮಿಣ ಮೂಲ ಸೌಕರ್ಯ ರೂಪಿಸುವುದು, ಜೀವನೊಪಾಯಕ್ಕೆ ಬೇಕಾಗಿರುವ ವ್ಯವಸ್ಥೆ ಕಲ್ಪಿಸುವುದು, ಹವಾಮಾನ ವೈಪರಿತ್ಯದಿಂದ ಆಗುವ ಅನಾಹುತ ಸರಿಪಡಿಸುವುದನ್ನು ನೂತನ ಕಾಯ್ದೆಯಲ್ಲಿ ಜಾರಿಗೆ ತರಲಾಗಿದೆ ಎಂದರು.
1980 ರಲ್ಲಿ ಎನ್. ಆರ್. ಇ. ಜಿ ಎಂದು ಈ ಯೋಜನೆಯ ಹೆಸರಿತ್ತು. ನಂತರ ಮನರೇಗಾ ಅಂತ ಹೆಸರು ಬದಲಾಯಿಸಲಾಯಿತು. ಕಾಂಗ್ರೆಸ್ ತಪ್ಪು ಸಂದೇಶವನ್ನು ನೀಡುತ್ತಿದೆ. ಗಾಂಧಿಜಿಯವರ ರಾಮರಾಜ್ಯ ಕನಸು ನನಸು ಮಾಡಲು ನರೇಂದ್ರ ಮೋದಿ ಹೆಸರು ಬದಲಾವಣೆ ಮಾಡಿರುವುದು ಸ್ವಾಗತಾರ್ಹ ಎಂದರು.
ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾ ಸಮ್ಮೇಳನ, ತಾಲ್ಲೂಕ ಮಟ್ಟ, ಗ್ರಾಮ ಮಟ್ಟದ ಸಭೆ ನಡೆಸಿ ಜಿ.ರಾಮ್.ಜಿ ಕಾಯ್ದೆ ಕುರಿತು ಜನರಿಗೆ ಹಾಗೂ ಕೃಷಿಕರಿಗೆ ಮನವರಿಕೆ ಮಾಡಿಕೊಡಲಾಗುವುದು. ಸಿ. ಸಿ ಪಾಟೀಲ ಮಾಜಿ ಸಚಿವ, ಹಾಲಿ ಶಾಸಕ ನರಗುಂದ ಮತಕ್ಷೇತ್ರ ಈ ವೇಳೆ ಭಾರತೀಯ ಜನತಾ ಪಕ್ಷದ ಗದಗ ಜಿಲ್ಲಾಧ್ಯಕ್ಷ ರಾಜು ಕುರಡಗಿ, ಮಾಜಿ ನಗರಸಭೆ ಅಧ್ಯಕ್ಷೆ ಉಷಾ ದಾಸರ, ನಿರ್ಮಲಾ ಕೊಳ್ಳಿ, ಎಂ. ಎಂ ಹಿರೇಮಠ, ಎಂ. ಎಸ್. ಕರಿಗೌಡ್ರ, ರವಿ ದಂಡಿನ್, ಲಿಂಗರಾಜಗೌಡ ಪಾಟೀಲ, ದತ್ತಣ್ಣ ಜೋಶಿ, ರಮೇಶ ಸಜ್ಜಗಾರ, ಸಿದ್ದು ಪಲ್ಲೇದ, ಉಡುಪಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 