ಗದಗ: ಆಮಿಷಕ್ಕೊಳಗಾಗದೇ ತಪ್ಪದೇ ಮತ ಚಲಾವಣೆಗೆ ಪ್ರೇರೇಪಿಸಿ ಚವ್ಹಾಣ ಹೇಳಿಕೆ
ಗದಗ 14: ಶಾಲಾ ಕಾಲೇಜುಗಳಲ್ಲಿ ಸಾಕ್ಷರತ ಕ್ಲಬ್ಗಳ ಸಂಚಾಲಕರು ವಿದ್ಯಾರ್ಥಿ ಗಳು, ಪಾಲಕರು, ತಪ್ಪದೇ ಮತದಾನ ಮಾಡುವ ರೀತಿಯಲ್ಲಿ ಪ್ರೇರಣಾತ್ಮಕ ಕಾರ್ಯ ನಿರ್ವಹಿಸಲು ಜಿ. ಪಂ ಸಿಇಒ ಹಾಗೂ ಗದಗ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ ನುಡಿದರು.
ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿಗಳ ಬಿ.ಆರ್.ಸಿ ಕೇಂದ್ರದಲ್ಲಿ ವ್ಯಾಪ್ತಿಯ ಶಾಲೆಗಳ ಸಾಕ್ಷರತಾ ಕ್ಲಬ್ಗಳ ಸಂಚಾಲಕರಿಗೆ ಜಿಲ್ಲಾ ಸ್ವೀಪ್ ಸಮಿತಿ ಮತದಾನ ಜಾಗೃತಿ ಕುರಿತಂತೆ ಆಯೋಜಿಸಿದ ಎರಡು ದಿನಗಳ ತರಬೇತಿಗೆ ಚಾಲನೆ ನೀಡಿ ಅವರು ಮಾತನಾಡಿದರು ಜಿಲ್ಲೆಯ ಎಲ್ಲ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಯ ಶಾಲೆಗಳಲ್ಲಿ ಸ್ಥಾಪಿತಗೊಂಡಿರುವ ಸಾಕ್ಷರತಾ ಕ್ಲಬ್ಗಳು ಈ ಬಾರಿ ಹೆಚ್ಚಿನ ಆಸಕ್ತಿವಹಿಸಿ ಕೆಲಸ ಮಾಡಿ ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ಮತದಾನದ ಪ್ರಮಾಣ ಹೆಚ್ಚಳವಾಗುವಂತೆ ಕಾರ್ಯನಿರ್ವಹಿಸಬೇಕು. ಮತದಾನ ಪಟ್ಟಿಯಲ್ಲಿ ಇರುವವರು ಯಾವುದೇ ಆಮಿಷಕ್ಕೊಳಗಾಗದೇ ತಪ್ಪದೇ ಮತ ಚಲಾಯಿಸುವಂತೆ ಪ್ರೇರೇಪಿಸುವಲ್ಲಿ ಸಾಕ್ಷ್ಷರತಾ ಕ್ಲಬ್ಗಳ ಪ್ರಯತ್ನ ಬಹು ಮುಖ್ಯ ಎಂದು ಚವ್ಹಾಣ ನುಡಿದರು.
ಜಿ. ಪಂ ಯೋಜನಾ ನಿದರ್ೇಶಕ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿಗಳಾದ ಟಿ. ದಿನೇಶ, ಗದಗ ಗ್ರಾಮೀಣ ಕ್ಷೇತ್ರ್ರಶಿಕ್ಷಣಾಧಿಕಾರಿ ಎಂ.ಎ.ರಡ್ಠೇರ, ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಎಸ್. ಕೆ. ಹವಾಲ್ದಾರ ಉಪಸ್ಥಿತರಿದ್ದರು.
ಗದಗ ಗ್ರಾಮೀಣ ಕ್ಷೇತ್ರಶಿಕ್ಷಣಾಧಿಕಾರಿಗಳ ಬಿ.ಆರ್.ಸಿ ಕೇಂದ್ರದ ವಿವೇಕಾನಂದ ಪಾಟೀಲ, ಹಾಗೂ ನದಾಫ ಅವರುಗಳು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಭಾರತ ಚುನಾವಣಾ ಆಯೋಗದ ನಿರ್ದೇಶನಗಳ ರೀತಿ ಮತದಾರರ ಜಾಗೃತಿ ಕುರಿತಂತೆ ಶಾಲಾ ಸಾಕ್ಷರತಾ ಕ್ಲಬ್ಗಳು ನಿರ್ವಹಿಸಬೇಕಾದ ಪಾತ್ರದ ಕುರಿತು ತರಬೇತಿ ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 