ಗದಗ: ಲೋಕಸಭಾ ಸಾರ್ವತ್ರಿಕ ಚುನಾವಣೆ ಲೋಯಲಾ ಪ್ರೌಢಶಾಲೆಯಲ್ಲಿ ಮತದಾರ ಜಾಗೃತಿ ಕಾರ್ಯಕ್ರಮ
ಗದಗ 15: ಅಕ್ಷರದಾಸೋಹದ ಬಿಸಿಯೂಟ ತಯಾರಿಕಾ ಸಿಬ್ಬಂದಿಗಳಿಗೆ ಗದಗ ಬೆಟಗೇರಿಯ ಲೋಯಲಾ ಪ್ರೌಢಶಾಲೆಯಲ್ಲಿ ಮತದಾರ ಜಾಗೃತಿ ಕಾರ್ಯಕ್ರಮ ಜರುಗಿತು.
ಗದಗ ತಾಲೂಕು ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿಗಳು ಬಿಸಿಯೂಟ ತಯಾರಿಕಾ ಸಿಬ್ಬಂದಿ ಲೋಕಸಭಾ ಚುನಾವಣೆ ಮತದಾನದಲ್ಲಿ ತಪ್ಪದೇ ಮತ ಚಲಾಯಿಸಿ ತಮ್ಮ ಕುಟುಂಬದ, ಸಮಾಜದ ಹಾಗೂ ಸುತ್ತಲಿನ ಅರ್ಹ ಮತದಾರರು ಯಾವುದೇ ಆಮಿಷಕ್ಕೊಳಗಾಗದೇ, ತಪ್ಪದೇ ಮತ ಚಲಾಯಿಸಲು ಪ್ರೇರೆಪಿಸುವಂತೆ ತಿಳಿಸಿದರು. ಇದೇ ಸಂದರ್ಭದಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೇ ಮತದಾನವನ್ನು ತಪ್ಪದೇ ಮಾಡುವ ಪ್ರತಿಜ್ಞಾ ವಿಧಿಯನ್ನು ಕೈಗೊಳ್ಳಲಾಯಿತು. ಇ.ವಿ.ಎಂ ಮತಯಂತ್ರದ ಪ್ರಾತ್ಯಕ್ಷಿಕೆ ಈ ಸಂದರ್ಭದಲ್ಲಿ ಜರುಗಿತು.
ಅಕ್ಷರ ದಾಸೋಹ ಅಧಿಕಾರಿ ಅಸುಂಡಿ, ಗದಗ ಶಹರದ ಕ್ಷೇತ್ರ ಶಿಕ್ಷಣಾಧಿಕಾರಿ ಕೆಳದಿಮಠ, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ರಡ್ಡೇರ, ಜಿಲ್ಲಾ ಸ್ವೀಪ ಸಮಿತಿ ಅಧಿಕಾರಿ ಎಸ್.ಕೆ ಹವಾಲ್ದಾರ, ತಾಲೂಕು ಪಂಚಾಯತ ಪಿ.ಡಿ.ಓ ಹಾಗೂ ಗದಗ ವ್ಯಾಪ್ತಿಯ ಬಿಸಿಯೂಟ ತಯಾರಕಾ ಸಿಬ್ಬಂದಿಗಳು ಮತದಾರ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 