ದೈನಂದಿನ ಬದುಕಿಗೆ ಆಟಗಳಿಂದ ಮನಸ್ಸಿಗೆ ನೆಮ್ಮದಿ
Games for everyday life bring peace of mind
ದೈನಂದಿನ ಬದುಕಿಗೆ ಆಟಗಳಿಂದ ಮನಸ್ಸಿಗೆ ನೆಮ್ಮದಿ
ಹೂವಿನ ಹಡಗಲಿ 10: ವೃತ್ತಿಯ ದೈನಂದಿನ ಜೀವನದಲ್ಲಿ ಉಲ್ಲಾಸ ಉತ್ಸಾಹ ಮೂಡಿಸಲು ಆಟಗಳು ಕಾರಣ ಎಂದು ವೈದ್ಯಕೀಯ ಸಂಘದ ಅಧ್ಯಕ್ಷ ಡಾ ಎಚ್ ಎಂ ವೀರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು. ಪಟ್ಟಣದ ತುಂಗಭದ್ರಾ ಸರ್ಕಾರಿ ಅನುದಾನಿತ ಪ್ರೌಢಶಾಲೆಯಲ್ಲಿ ಭಾನುವಾರ ವೈದ್ಯಕೀಯ ಸಂಘದ ವತಿಯಿಂದ ಆಯೋಜಿಸಿದ್ದ ವಿವಿಧ ಆಟೋಟಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಡಾ ಅಟವಾಳಗಿ ಪ್ರಕಾಶ್ ವೈದ್ಯಕೀಯ ಸಂಘದ ವತಿಯಿಂದ ವರ್ಷಪೂರ್ತಿ ವಿನೂತನ ರೀತಿಯಲ್ಲಿ ಕಾರ್ಯಕ್ರಮಗಳನ್ನು ಮುಂದಿನ ದಿನಗಳಲ್ಲಿ ಸಂಘಟಿಸಲಾಗುವುದು ಎಂದು ಹೇಳಿದರು.ಚಿತ್ರಕಲಾ ಶಿಕ್ಷಕರಾದ ಎಸ್ ದ್ವಾರಕೀಶ್ ರೆಡ್ಡಿ ಉಪನ್ಯಾಸಕ ಶಂಕರ್ ಬೆಟಗೇರಿ, ಡಾ ರಾಕೇಶಯ್ಯ ರಾಮಸ್ವಾಮಿ,ಡಾ ಆನಂದ್, ಡಾ ಕೆ ವೀರೇಶ್,ಡಾ ಸೋಮಶೇಖರ್, ಬೆಲ್ಲದ ದರ್ಶನ್, ಕಾರ್ತಿಕ್ ಇತರರು ಹಾಜರಿದ್ದರು.ಮುಖ್ಯ ಗುರು ಸುರೇಶ ಅಂಗಡಿ ಅಧ್ಯಕ್ಷತೆ ವಹಿಸಿದ್ದರು. ಡಾ ಜೆ ಡಿ ಉಮೇಶ್ ನಿರ್ವಹಿಸಿದರು.ವೈದ್ಯಕೀಯ ಸಂಘದ ಪದಾಧಿಕಾರಿಗಳು ಕ್ರಿಕೆಟ್ ಥ್ರೋಬಾಲ್ ವಾಲಿಬಾಲ್ ವಿವಿಧ ಆಟಗಳಲ್ಲಿ ಉತ್ಸಾಹದಿಂದ ಪಾಲ್ಗೊಂಡು ಸಾರ್ಥಕಗೊಳಿಸಿದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 