‘ಕನ್ನಡಗಾದೆ ಮಾತುಗಳ ಆಧರಿಸಿ ಕಥೆ ಹೇಳುವ ಸ್ಪರ್ಧೆ’ಯ ಅತಿಥಿಯಾಗಿ ಗಂಗಾ ಚವಣ್ಣವರ
Ganga Chavannavara as the guest of the ‘Storytelling Competition based on Kannada proverbs’
ಧಾರವಾಡ 22: ಗಾದೆಗಳು ನಮಗೆ ಜೀವನ ಪಾಠ ಕಲಿಸುವ ಪ್ರಬಲ ಮಾಧ್ಯಮ.ಅವು ನಮ್ಮ ಹಿರಿಯರ ಲೋಕಾನುಭವದ ಬದುಕಿನ ಮಾತುಗಳು. ವೇದ ಸುಳ್ಳಾದರೂ ಗಾದೆ ಎಂದಿಗೂ ಸುಳ್ಳಾಗುವುದಿಲ್ಲ ಎಂದುಜೆ.ಎಸ್.ಎಸ್. ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕಿ ಗಂಗಾ ಚವಣ್ಣವರ ಅವರು ಹೇಳಿದರು.
ಅವರುಕರ್ನಾಟಕ ವಿದ್ಯಾವರ್ಧಕ ಸಂಘವು ಆಯೋಜಿಸಿದ್ದ ದಿ.ಆನಂದ ಚಿಗಟೇರಿ ಸಂಸ್ಮರಣಾ ದತ್ತಿ ಕಾರ್ಯಕ್ರಮದಲ್ಲಿ ‘ಕನ್ನಡಗಾದೆ ಮಾತುಗಳ ಆಧರಿಸಿ ಕಥೆ ಹೇಳುವ ಸ್ಪರ್ಧೆ’ಯ ಅತಿಥಿಯಾಗಿ ಮಾತನಾಡಿದರು.
ಇಂದಿನ ತ್ವರಿತ ಕಾಲದಲ್ಲಿ ಜ್ಞಾನವೊಂದಿದ್ದರೆ ಸಾಲದು, ಜ್ಞಾನದ ಜೊತೆಗೆ ಕೌಶಲ್ಯವೂ ಬಹಳ ಮುಖ್ಯ. ವಿದ್ಯಾರ್ಥಿಗಳು ಇಂದು ಪಠ್ಯಪುಸ್ತಕಗಳಿಗೆ ಮಾತ್ರ ಸೀಮಿತ ಬೇಡ. ಪಠ್ಯ ಮೀರಿದಜ್ಞಾನಅಗತ್ಯವಾಗಿದೆ. ಗಾದೆಗಳು ನಮ್ಮ ದೈನಂದಿನ ಬದುಕಿನ ಮೂಲವಾಗಿವೆ. ನಮ್ಮ ಸಮಾಜದ ಸಂಸ್ಕೃತಿ, ಆಚಾರ, ವಿಚಾರಗಳನ್ನು ಪ್ರತಿಬಿಂಬಿಸುತ್ತವೆ. ಮಹಿಳೆಯರು ಇಂತಹ ಕಾರ್ಯಕ್ರಮದಲ್ಲಿ ಮುಕ್ತವಾಗಿ ಭಾಗವಹಿಸಿ, ತಮ್ಮ ಪ್ರತಿಭೆಯನ್ನು ಅನಾವರಣ ಗೊಳಿಸುತ್ತಿರುವುದು ಅಭಿನಂದನೀಯ ಎಂದು ಹೇಳಿದರು.
ಜೆ.ಎಸ್.ಎಸ್ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ದೀಪಾ ಸಂಕಪಾಳೆ ಮಾತನಾಡುತ್ತಾ, ಗಾದೆಗಳು ಭಾಷೆಯ ಅವಿಭಾಜ್ಯ ಅಂಗ.ಜೀವನದ ಅನುಭವ, ಜ್ಞಾನ, ನಂಬಿಕೆಗಳನ್ನು ಸಂಕ್ಷಿಪ್ತವಾಗಿ ರೂಪಕಗಳ ಮೂಲಕ ವ್ಯಕ್ತಪಡಿಸುವ ಸಾಂಪ್ರದಾಯಿಕ ಹೇಳಿಕೆಗಳು ಅದರಲ್ಲೂ, ಜಾನಪದದ ಅನೇಕ ಗಾದೆಗಳು ಮೌಖಿಕ ಪರಂಪರೆ ಮೂಲಕ ಸಮಾಜತಿದ್ದುವಕಾರ್ಯ ಮಾಡುತ್ತವೆಎಂದರು.
ಅಧ್ಯಕ್ಷತೆ ವಹಿಸಿದ್ದ ಕರ್ನಾಟಕಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ ಶಿವಾನಂದ ಚೌಗಲಾ ಮಾತನಾಡಿ, ಇಂದು ಮಹಿಳೆಯರು ಹೇಳಿದ ಗಾದೆಗಳು ಸತ್ಯ ಹಾಗೂ ಸತ್ವವುಳ್ಳವುಗಳಾಗಿವೆ. ಮಹಿಳಾ ಮಂಡಳದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡಿದ್ದು ಖುಷಿ ಎನಿಸಿದೆ. ಎಲ್ಲರೂತಮ್ಮ ಪ್ರಭುದ್ಧತೆಯನ್ನು ವ್ಯಕ್ತಪಡಿಸಿದ್ದಾರೆ. ರಿಯಾಲಿಟಿ ಶೋ ದಂತಹಕಾರ್ಯಕ್ರಮದಲ್ಲಿ ನಮ್ಮಕನ್ನಡದ ಮಹಿಳೆಯರು ಹೆಚ್ಚು ಭಾಗವಹಿಸುವಂತಾಗಬೇಕೆಂದರು.
ವಿಶ್ವೇಶ್ವರಿ ಹಿರೇಮಠ ಸ್ವಾಗತಿಸಿದರು.ಡಾ. ಮಹೇಶ ಧ.ಹೊರಕೇರಿ ನಿರ್ವಹಿಸಿದರು.ಡಾ. ನಿರ್ಮಲಾ ಚಿಗಟೇರಿ, ಡಾ.ಶಾರದಾಚಿಗಟೇರಿ ಪರಿಚಯಿಸಿದರು. ಶಂಕರ ಕುಂಬಿ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ದತ್ತಿದಾನಿಗಳ ಪರವಾಗಿಡಾ. ಮಂಗಳಾ ಚಿಗಟೇರಿ ಹಾಗೂ ಕವಿವ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಉಪಸ್ಥಿತರಿದ್ದು ಮಾತನಾಡಿದರು. ವೀರಣ್ಣ ಒಡ್ಡೀನಕೊನೆಯಲ್ಲಿ ವಂದಿಸಿದರು.
ಕಥಾ ಸ್ಪರ್ಧೆಯಲ್ಲಿ ವಿಜೇತರಾದ ಜಯಶ್ರೀ ಗುತ್ತಲ ಪ್ರಥಮ, ಜಯಶೀಲಾ ಹಿರೇಮಠ ದ್ವಿತೀಯ, ಮಂಜುಳಾ ಹೊಸೂರತೃತೀಯ ಸ್ಥಾನ ಪಡೆದರೆ, ವಿಜಯಾಕುಲಕರ್ಣಿ ಹಾಗೂ ಪ್ರೇಮಾ ನಡೆಕಟ್ಟ್ಟಿ ಸಮಾಧಾನಕರ ಬಹುಮಾನ ಪಡೆದರು. ವಿಜೇತರಾದವರಿಗೆ ಪ್ರಮಾಣ ಪತ್ರ ವಿತರಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಶಿವಾನಂದ ಭಾವಿಕಟ್ಟಿ, ಡಾ ಶೈಲಜಾಅಮರಶೆಟ್ಟಿ, ಪ್ರೊ. ಈಶಣ್ಣ ಸೇರಿದಂತೆ ಮುಂತಾದವರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 