ಗಟಾರು ನಿರ್ವಹಣೆ ಅವ್ಯವಸ್ಥೆ: ಜನತೆಗೆ ತೊಂದರೆ
ಲೋಕದರ್ಶನ ವರದಿ
ಯಲ್ಲಾಪುರ: ಮಳೆಯಿಲ್ಲದೇ ಕಂಗೆಟ್ಟದ್ದ ಪಟ್ಟಣದಲ್ಲಿ ಮಳೆ ಆರಂಭಗೊಂಡಿದೆ. ಬುಧವಾರ ಜೋರಾಗಿ , ಸಂಜೆಯ ವೇಳೆ ಭಾರಿ ಮಳೆ ಸುರಿಯುತ್ತಿದ್ದು, ತಗ್ಗಿನ ಪ್ರದೇಶಗಳಲ್ಲಿ ನೀರು ಹರಿಯುತ್ತಿದೆ. ಸುರಿಯುತ್ತಿರುವ ಮಳೆಗೆ ಮನೆಗಳಿಗೆ ನೀರು ನುಗ್ಗಿದ್ದು ಪಟ್ಟಣದ ಮುಂಡಗೋಡ ರಸ್ತೆಯ ರವೀಂದ್ರನಗರ ಕಲಾವಿದ ಮಹೇಶ ಅಲ್ಮಠ ಮನೆಯ ಸಮೀಪದ ಮುಖ್ಯರಸ್ತೆ ಹಾಗೂ ಕಾಳಮ್ಮನಗರದ ಮುಖ್ಯ ರಸ್ತೆಯ ಗಟಾರ ಸ್ವಚ್ಚಗೊಳಿಸದೇ ಇರುವ ಕಾರಣ ನರಸಿಂಹ ಮೂರ್ತಿ ಎಂಬುವವರ ಮನೆಯ ಒಳಗೆ ನುಗ್ಗಿದೆ.
ವರಾಂಡ ಹಾಗೂ ಮನೆಯೊಳಗೆ ನೀರು ತುಂಬಿದ್ದು, ಮನೆಯೊಳಗೆ ತುಂಬಿದ ನೀರನ್ನು ಹೊರ ಹಾಕಲು ಮನೆಯ ಜನರೆಲ್ಲ ಹರ ಸಾಹಸ ಪಡುತ್ತಿದ್ದಾರೆ. ಮಳೆಗಾಲ ಸಮೀಪಿಸುತ್ತಿದ್ದರೂ ಗಟಾರಗಳನ್ನು ಪಟ್ಟಣ ಪಂಚಾಯ್ತಿ ಸ್ವಚ್ಚಗೊಳಿಸದೇ ಇರುವುದಕ್ಕೆ ಮನೆಗಳಿಗೆ ನೀರು ನುಗ್ಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದೆ ರಸ್ತೆಯಲ್ಲಿ ದಿನಾಲೂ ಪುಟ್ಟ ಶಾಲಾ ಮಕ್ಕಳು ವೃದ್ದರು ಓಡಾಡುತ್ತಿದ್ದು ಅಪಾಯಕ್ಕೆ ಆಹ್ವಾನ ನೀಡುವಂತಾಗಿದೆ.ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಕೂಡ ಯಾವುದೇ ಕ್ರಮ ಕೈಗೊಂಡಿಲ್ಲ.ಇಲ್ಲಿನ ವಾರ್ಡನ ಸದಸ್ಯರು ಗಮನಹರಿಸಿ ಸಮಸ್ಯೆಗೆ ಸ್ಪಂದಿಸಬೇಕೆಂದು ಸ್ಥಳೀಯರ ಆಗ್ರಹವಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 