ಗವಿಸಿದ್ಧೇಶ್ವರ ಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ
Gavisiddheshwara Devotional Audio Roll Released
ಗವಿಸಿದ್ಧೇಶ್ವರ ಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ
ಕೊಪ್ಪಳ 16: ಉತ್ತಮ ಕೃಷಿ ಪ್ರಶಸ್ತಿ ವಿಜೇತ ಹಾಗೂ ಸಮಾಜ ಸೇವಕರಾದ ಕೊಪ್ಪಳ ತಾಲೂಕಿನ ಇರಕಲ್ಲಗಡದ ಗ್ರಾಮದ ವೀರಬಸಪ್ಪ ಪಟ್ಟಣಶೆಟ್ಟಿ ಇವರಿಂದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ರಚಿಸಿದ ಭಕ್ತಿಗೀತೆಯನ್ನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು. ಮೂಲತಹ ಕೃಷಿಕರಾದ ಇವರು ತಮ್ಮ 83ನೇ ವಯಸ್ಸಿನಲ್ಲಿ ತಾವೇ ಸ್ವತಃ ಸಾಹಿತ್ಯವನ್ನು ರಚಿಸಿ ಹಾಗೂ ಹಾಡುವುದರ ಮೂಲಕ ಗವಿಸಿದ್ದೇಶ್ವರನಿಗೆ ತಮ್ಮ ಸಾಹಿತ್ಯದ ನುಡಿಸೇವೆಯನ್ನು ಸಲ್ಲಿಸಿದ್ದಾರೆ. ಈ ಭಕ್ತಿಗೀತೆಯನ್ನು ಗಾಯಕರಾದ ಬಾಷು ಕಿನ್ನಾಳ ಅವರು ಸಂಗೀತ ಸಂಯೋಜನೆಯೊಂದಿಗೆ ಧ್ವನಿ ಸೇವೆ ಗೈದಿರುತ್ತಾರೆ. ವಿರೇಶಕುಮಾರ ಬೇಟಗೇರಿ ಸಂಕಲಿಸಿರುತ್ತಾರೆ. ಈ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರು ಹಾಜರಿದ್ದರು. ಸಾಹಿತ್ಯ ರಚನೆಕಾರರಾದ ಅವರಿಗೆ ಶ್ರೀಗಳು ಆಶೀರ್ವದಿಸಿದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 