ಗವಿಸಿದ್ಧೇಶ್ವರ ಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ
Gavisiddheshwara Devotional Audio Roll Released
ಗವಿಸಿದ್ಧೇಶ್ವರ ಭಕ್ತಿಗೀತೆ ಧ್ವನಿ ಸುರುಳಿ ಬಿಡುಗಡೆ
ಕೊಪ್ಪಳ 16: ಉತ್ತಮ ಕೃಷಿ ಪ್ರಶಸ್ತಿ ವಿಜೇತ ಹಾಗೂ ಸಮಾಜ ಸೇವಕರಾದ ಕೊಪ್ಪಳ ತಾಲೂಕಿನ ಇರಕಲ್ಲಗಡದ ಗ್ರಾಮದ ವೀರಬಸಪ್ಪ ಪಟ್ಟಣಶೆಟ್ಟಿ ಇವರಿಂದ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ರಚಿಸಿದ ಭಕ್ತಿಗೀತೆಯನ್ನು ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು. ಮೂಲತಹ ಕೃಷಿಕರಾದ ಇವರು ತಮ್ಮ 83ನೇ ವಯಸ್ಸಿನಲ್ಲಿ ತಾವೇ ಸ್ವತಃ ಸಾಹಿತ್ಯವನ್ನು ರಚಿಸಿ ಹಾಗೂ ಹಾಡುವುದರ ಮೂಲಕ ಗವಿಸಿದ್ದೇಶ್ವರನಿಗೆ ತಮ್ಮ ಸಾಹಿತ್ಯದ ನುಡಿಸೇವೆಯನ್ನು ಸಲ್ಲಿಸಿದ್ದಾರೆ. ಈ ಭಕ್ತಿಗೀತೆಯನ್ನು ಗಾಯಕರಾದ ಬಾಷು ಕಿನ್ನಾಳ ಅವರು ಸಂಗೀತ ಸಂಯೋಜನೆಯೊಂದಿಗೆ ಧ್ವನಿ ಸೇವೆ ಗೈದಿರುತ್ತಾರೆ. ವಿರೇಶಕುಮಾರ ಬೇಟಗೇರಿ ಸಂಕಲಿಸಿರುತ್ತಾರೆ. ಈ ಸಂದರ್ಭದಲ್ಲಿ ಅವರ ಕುಟುಂಬ ವರ್ಗದವರು ಹಾಜರಿದ್ದರು. ಸಾಹಿತ್ಯ ರಚನೆಕಾರರಾದ ಅವರಿಗೆ ಶ್ರೀಗಳು ಆಶೀರ್ವದಿಸಿದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 