ಮಕ್ಕಳ ಬಿಸಿಯೂಟಕ್ಕೆ ಶುದ್ದತೆ ಆಹಾರ ನೀಡಿ : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರಪಾಷ ಪಲ್ಟನ್
Give clean food to the children: Municipal Standing Committee Chairman Akbar Pasha Paltan
ಮಕ್ಕಳ ಬಿಸಿಯೂಟಕ್ಕೆ ಶುದ್ದತೆ ಆಹಾರ ನೀಡಿ : ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರಪಾಷ ಪಲ್ಟನ್
ಕೊಪ್ಪಳ : 06 ನಗರದ ಜಿ.ಜಿ.ಎಮ್.ಎಸ್ ಮತ್ತು ಉರ್ದು ಶಾಲೆಗೆ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಅಕ್ಬರಪಾಷ ಪಲ್ಟನ್ ಬೇಟೆ ನೀಡಿ ಮದ್ಯಾಹ್ನ ಸಮಯದಲ್ಲಿ ಮಕ್ಕಳಿಗೆ ಬಿಸಿಯೂಟ ಮತ್ತು ಮೊಟ್ಟೆ ವಿತರಣೆಯನ್ನು ಪರೀಶೀಲಿಸಿದರು. ಹೊರ ಜಿಲ್ಲೆಯ ಶಾಲೆಯಲ್ಲಿ ಕೊಳೆತ ಮೊಟ್ಟೆಯನ್ನು ಮಕ್ಕಳಿಗೆ ವಿತರಣೆ ಮಾಡಲಾಗಿದ್ದು, ಈ ಕುರಿತು ಮಾದ್ಯಮದಲ್ಲಿ ಪ್ರಸಾರವಾದ ಸುದ್ದಿಯನ್ನು ನೋಡಿ ಎಚ್ಚೆತ ಸ್ಥಾಯಿ ಸಮಿತಿ ಅಧ್ಯಕ್ಷರು ಜಿ.ಜಿ.ಎಮ್.ಎಸ್ ಮತ್ತು ಉರ್ದು ಶಾಲೆಗೆ ದಿಢೀರ ಬೇಟಿ ನೀಡಿ ಶಾಲೆಯಲ್ಲಿ ಕಳಪೆ ಮತ್ತು ಕೊಳೆತ ಮೊಟ್ಟೆಯನ್ನು ವಿತರಣೆ ಮಾಡದಂತೆ ಮುಖ್ಯ ಶಿಕ್ಷಕರಿಗೆ, ಸಹಶಿಕ್ಷಕರಿಗೆ ಮತ್ತು ಅಡುಗೆ ಸಿಬ್ಬಂದಿಯವರಿಗೆ ಹೇಳಿದರು, ಮೊಟ್ಟೆ ವಿತರಣೆ ಮೊದಲು ಅದರ ಗುಣಮಟ್ಟುವನ್ನು ನೀರಿನಲ್ಲಿ ಪರೀಕ್ಷಿಸಿ ನಂತರ ಮಕ್ಕಳಿಗೆ ವಿತರಿಸಲು ಸೂಚಿಸಿದರು. ಈ ಕುರಿತು ಸಂಬಂಧ ಪಟ್ಟ ಅಧಿಕಾರಿಗಳು ಕೊಪ್ಪಳ ಜಿಲ್ಲೆಯಲ್ಲಿ ವಿತರಣೆಯಾಗುವ ಮೊಟ್ಟೆಗಳನ್ನು ಮಕ್ಕಳ ಆರೊಗ್ಯ ಹಿತದೃಷ್ಟಿಯಿಂದ ಪರೀಕ್ಷಿಸಿದ ನಂತರ ಗುಣಮಟ್ಟದ ಮೊಟ್ಟೆಗಳನ್ನು ಶಾಲೆಗಳಿಗೆ ವಿತರಣೆ ಮಾಡಲು ವಿನಂತಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಅಡುಗೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 