ಗೀತಾ ಉಮಚಗಿಗೆ ಬಂಗಾರ ಪದಕ
ಲೋಕದರ್ಶನ ವರದಿ
ಧಾರವಾಡ 13: ಗಾಯನ ಕ್ಷೇತ್ರದ ಯುವ ಪ್ರತಿಭೆ ಗೀತಾ ಬಸಪ್ಪ ಉಮಚಗಿ ಸ್ನಾತಕೋತ್ತರ ಸಂಗೀತ ಅಧ್ಯಯನ ಮತ್ತು ಸಂಶೋಧನಾ ವಿಭಾಗದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪ್ರಯುಕ್ತ, ಕವಿವಿಯ 69ನೇ ಘಟಿಕೋತ್ಸವದಲ್ಲಿ ಫೆ.4ರಂದು ಬಂಗಾರ ಪದಕದೊಂದಿಗೆ ಗೌರವಿಸಲ್ಪಟ್ಟಿದ್ದಾರೆ.
ಗಾಯನ (ಠುಮರಿ) ವಿಭಾಗದಲ್ಲಿ ವಿದುಷಿ ದಿ. ಜಾನಕಿ ಅಯ್ಯರ್ ಸ್ಮರಣಾರ್ಥ ಬಂಗಾರ ಪದಕ ಪುರಸ್ಕಾರಕ್ಕೆ ಅವರು ಭಾಜನರಾಗಿದ್ದಾರೆ. ಹೊಸ ದಿಲ್ಲಿಯ ಸಿಎಸ್ಐಆರ್ ಮಹಾನಿದರ್ೇಶಕ ಹಾಗೂ ಡಿಎಸ್ಐಆರ್ ಕಾರ್ಯದಶರ್ಿ ಪ್ರೊ. ಶೇಖರ ಮಂಡೆ, ಕುಲಪತಿ ಪ್ರೊ. ಪ್ರಮೋದ ಗಾಯಿ, ಕುಲಸಚಿವರಾದ ಪ್ರೊ. ವಿಜಯಲಕ್ಷ್ಮೀ ಅಮ್ಮಿನಬಾವಿ, ಮೌಲ್ಯಮಾಪನ ಕುಲಸಚಿವ ಪ್ರೊ.ಎಂ.ಎನ್. ಸಾಲಿ ಗೀತಾ ಉಮಚಗಿ ಅವರಿಗೆ ಪುರಸ್ಕಾರ ಪ್ರದಾನ ಮಾಡಿದರು.
ಸ್ನಾತಕೋತ್ತರ ಸಂಗೀತ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಮುಖ್ಯಸ್ಥರಾದ ಡಾ. ವೀರಣ್ಣ ಹೂಗಾರ, ಪ್ರಾಧ್ಯಾಪಕ ಡಾ. ಮೃತ್ಯುಂಜಯ ಅಗಡಿ ಹಾಗೂ ಶಿಕ್ಷಕ ವರ್ಗ ಅವರ ಸಾಧನೆಗೆ ಅಭಿನಂದಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 