ರಾಜ್ಯದ ಅಭ್ಯರ್ಥಿಗಳಿಗೆ ಸುವರ್ಣಾವಕಾಶ: ಮಂಗಳೂರು ಎ.ಆರ್.ಓ ಅಗ್ನಿವೀರ ಉಚಿತ ಫಿಸಿಕಲ್ ತರಬೇತಿ
Golden opportunity for state candidates: Mangalore ARO Agniveer free physical training
ಮೂಡಲಗಿ 24: ಮುಂದೆ ನಡೆಯಲಿರುವ ಮಂಗಳೂರು ಎ.ಆರ್.ಓ. ಅಗ್ನಿವೀರ ಸೇನಾ ನೇಮಕಾತಿ ರಾ್ಯಲಿಯಲ್ಲಿ ಭಾಗವಹಿಸಲಿರುವ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಮಂಜುನಾಥ ಸೈನಿಕ ತರಬೇತಿ ಕೇಂದ್ರದಲ್ಲಿ ಸಿ.ಬಿ.ಟಿ. ಪರೀಕ್ಷೆಯಲ್ಲಿ ಉತ್ತೀರ್ಣರಾದ ಭಾವಿ ಅಗ್ನಿವೀರರಿಗೆ ಉಚಿತ ದೈಹಿಕ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರು ತಿಳಿಸಿದ್ದಾರೆ.
ಸರ್ಕಾರದಿಂದ ಮಾನ್ಯತೆ ಪಡೆದು ಯಶಸ್ವಿಯಾಗಿ 22 ನೇ ವರ್ಷದಲ್ಲಿ ಮುನ್ನಡೆಯುತ್ತಿರುವ ಅಕಾಡೆಮಿಯಿಂದ ಇತ್ತೀಚೆಗೆ ನಡೆದ ಬೆಳಗಾವಿ ಎ.ಆರ್.ಓ. ದ ನೇಮಕಾತಿಯಲ್ಲಿ 78 ಅಭ್ಯರ್ಥಿಗಳು ಸೇನೆಗೆ ಆಯ್ಕೆಯಾಗಿ ಕರ್ನಾಟಕದಲ್ಲಿ ಅತೀ ಹೆಚ್ಚು ಅಭ್ಯರ್ಥಿಗಳು ಈ ಸಂಸ್ಥೆಯಿಂದ ಸೇನೆಗೆ ಆಯ್ಕೆಯಾಗುತ್ತಾರೆ ಎಂದು ಸಾಕ್ಷಿಯಾಗಿದೆ. ಸೇನಾ ರಾ್ಯಲಿಯಲ್ಲಿ ನಡೆಯುವ 1600 ಮೀ. ಓಟ, ಫುಲ್-ಅಪ್ಸ್, ಲಾಂಗ್ ಜಂಪ್, ಜಿಗ್-ಜಾಗ್ ನಡಿಗೆ, ಮತ್ತು ವೈದ್ಯಕೀಯ ಪರೀಕ್ಷೆಗೆ ಸಂಭಂಧಪಟ್ಟ ತರಬೇತಿಯನ್ನು ನುರಿತ ಉಪನ್ಯಾಸಕರಿಂದ ತರಬೇತಿಯನ್ನು ನೀಡುತ್ತಿದ್ದು, ನೊಂದನೆಯ ಕೊನೆಯ ದಿನಾಂಕ 10 ಜನವರಿ 2026. ಮೊದಲು ಬಂದ 100 ಅಭ್ಯರ್ಥಿಗಳಿಗೆ ಮಾತ್ರ ಉಚಿತ ತರಬೇತಿಗೆ ಅವಕಾಶ ಇರುತ್ತದೆ, ಇಂದಿನಿಂದ ಪ್ರವೇಶ ಪಡೆಯಬಹುದು ಎಂದರು.
ಪ್ರವೇಶ ಪಡೆಯುವ ಅಭ್ಯರ್ಥಿಗಳು ಊಟ-ವಸತಿ, ಯುನಿಫಾರ್ಮ್ ಫೀಸ್ ಮಾತ್ರ ತುಂಬಬೇಕಾಗುತ್ತದೆ, ಕೋಚಿಂಗ್ ಫೀಸ್ ಇರುವುದಿಲ್ಲ. ಬರುವಾಗ ಅಡ್ಮಿಟ್ ಕಾರ್ಡ, 3 ಫೋಟೋ, ಎಸ್.ಎಸ್.ಎಲ್.ಸಿ. ಮಾರ್ಕ್ಸ್-ಕಾರ್ಡ್ ಝರಾಕ್ಸ್, ಆಧಾರ್ ಕಾರ್ಡ್ ಝರಾಕ್ಸ್, ಊಟ ಮಾಡಲಿಕ್ಕೆ ಒಂದು ಪ್ಲೇಟ್, ಗ್ಲಾಸ್, ಹಾಸಿಗೆ, ರನ್ನಿಂಗ್ ಶೂಸ್ ಮತ್ತೆ ತಮಗೆ ಬೇಕಾದ ಇತರೇ ವಸ್ತುಗಳನ್ನು ತಾವೇ ತರಬೇಕೆಂದು ಪತ್ರಿಕಾಗೊಷ್ಠಿಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 