ಸದ್ಭಾವನಾ ದಿನ: ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 20: ಸದ್ಭಾವನಾ ದಿನದ ಅಂಗವಾಗಿ ಗದಗ ಜಿಲ್ಲಾಡಳಿತ ಭವನದ ಅಡಿಟೋರಿಯಂದಲ್ಲಿಂದು ಜಾತಿ, ಧರ್ಮ, ಪ್ರದೇಶ, ಭಾಷೆಯ ಬೇಧ ಭಾವವಿಲ್ಲದೇ ಸೌಹಾರ್ದಕ್ಕಾಗಿ ಕಾರ್ಯ ನಿರ್ವಹಿಸುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು. ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ವೈಯಕ್ತಿಕವಾಗಲಿ ಅಥವಾ ಸಾಮೂಹಿಕವಾಗಿಯಾಗಲಿ ನಮ್ಮಲ್ಲಿರುವ ಎಲ್ಲ ಬೇಧಭಾವಗಳನ್ನು ಹಿಂಸಾಚಾರಕ್ಕೆ ಅವಕಾಶ ನೀಡದೆ ಸಮಾಲೋಚನೆ ಹಾಗೂ ಸಂವಿಧಾನಾತ್ಮಕ ಕ್ರಮಗಳ ಮೂಲಕ ಪರಿಹರಿಸುವ ಪ್ರಮಾಣ ವಚನವನ್ನು ಬೋಧಿಸಿದರು.
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಉಪ ವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಸದ್ಭಾವನಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 