ಖಾದಿ ಉಡುಪು ಖರೀದಿಗೆ ಉತ್ಸಾಹ ತೋರಿದ ಸರಕಾರಿ ನೌಕರರು
Government employees enthusiastic about buying Khadi clothes
ಕಾರವಾರ, ಫೆ.7: ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಸುತ್ತೋಲೆಯಂತೆ , ರಾಜ್ಯದ ಎಲ್ಲಾ ಸರ್ಕಾರಿ- ಅನುದಾನಿತ ಸಂಸ್ಥೆಗಳು-ನಿಗಮ- ಮಂಡಳಿ-ಸ್ವಾಯತ್ತ ಸಂಸ್ಥೆಗಳು -ವಿಶ್ವವಿದ್ಯಾಲಯಗಳ ಅಧಿತಕಾರಿ/ನೌಕರರು "ಸ್ವಯಂ ಪ್ರೇರಣೆಯಿಂದ" ಪ್ರತಿ ತಿಂಗಳ ಮೊದಲ ಶನಿವಾರದಂದು ಖಾದಿ ಉಡುಪನ್ನು ಧರಿಸುವ ಕುರಿತಂತೆ, ಉತ್ತರ ಕನ್ನಡ ಜಿಲ್ಲೆಯ ಸರಕಾರಿ ನೌಕರರು ಖಾದಿ ಉಡುಪುಗಳನ್ನು ಖರೀದಿಸಲು ಅನುಕೂಲವಾಗುವಂತೆ, ಹುಬ್ಬಳ್ಳಿ ಯ ಖಾದಿ ಹುಟ್ಟುವಳಿ ಕೇಂದ್ರದಿಂದ ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ತಾತ್ಕಾಲಿಕ ಮಳಿಗೆಯನ್ನು ತೆರೆಯಲಾಗಿತ್ತು.
ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಮಳಿಗೆಗೆ ಭೇಟಿ ನೀಡಿ, ಸಾಂಕೇತಿಕವಾಗಿ ಸರಕಾರಿ ನೌಕರರಿಗೆ ಖಾದಿ ಉಡುಪನ್ನು ನೀಡಿದರು. ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಸೇರಿದಂತೆ ವಿವಿಧ ಇಲಾಖೆಗಳ ಸರಕಾರಿ ನೌಕರರು ಅತ್ಯಂತ ಉತ್ಸಾಹದಿಂದ ಖಾದಿ ಉಡುಪುಗಳನ್ನು ಖರೀದಿಸಿದರು. ಅಪರ ಜಿಲ್ಲಾಧಿಕಾರಿ ಸಾಜೀದ್ ಮುಲ್ಲಾ, ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವ ನಾಯ್ಕ, ಉಪಾಧ್ಯಕ್ಷ ರಮೇಶ್ ನಾಯ್ಕ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 