ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಬೊಮ್ಮಾಯಿ
Government schemes should reach eligible beneficiaries - Bommai
ಹಾವೇರಿ 10 : ಪಿ.ಎಂ.ಸ್ವನಿಧಿ, ಎಂ.ಪಿ.ಕಿಸಾನ್, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳು ಬಡವರ ಯೋಜನೆಗಳಾಗಿದ್ದು, ಈ ಯೋಜನೆಗಳು ಅವರಿಗೆ ತಲುಪುವಂತೆ ಅಧಿಕಾರಿಗಳು ಹಾಗೂ ಬ್ಯಾಂಕರ್ಸ್ಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮಾರ್ಚ್ ಅಂತ್ಯದೊಳಗೆ ಗುರಿಸಾಧನೆ ಮಾಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಸೋಮವಾರ ಹಾವೇರಿ ಜಿಲ್ಲೆಯ ಬ್ಯಾಂಕುಗಳ ಸೆಪ್ಟೆಂಬರ್-2025ರ ಪ್ರಗತಿ ಪರೀಶೀಲನಾ ಸಭೆ ಹಾಗೂ ಸಲಹಾ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ, ಆರ್ಥಿಕವಾಗಿ ಹಿಂದುಳಿದ ವರ್ಗ, ಅಲ್ಪಸಂಖ್ಯಾತ, ಮಹಿಳೆಯರು ಹಾಗೂ ಇತರೆ ವಲಯಕ್ಕೂ ಗರಿಷ್ಠ ಸಾಲ ನೀಡಬೇಕು ಎಂದು ಸೂಚನೆ ನೀಡಿದರು.
ಬಡವರ ಯೋಜನೆಗಳಿಗೆ ನೀಡುವ ಸಾಲ ರೂ.10 ರಿಂದ 15 ಸಾವಿರ. ಹಣದ ವ್ಯವಹಾರದಲ್ಲ್ಲಿ ಮುಖ್ಯಮಂತ್ರಿಗಳಿಗೆ, ಸರ್ಕಾರ ಮುಖ್ಯ ಕಾರ್ಯದರ್ಶಿಗಳಿಗೆ ಹಾಗೂ ಇತರೆ ಅಧಿಕಾರಿಗಳಿಗೆ ಇರದ ಅಧಿಕಾರ ಬ್ಯಾಂಕ್ನವರಿಗೆ ಇದೆ. ಇದನ್ನು ತಿಳಿದುಕೊಂಡು ಬ್ಯಾಂಕ್ನವರು ಹೃದಯದಿಂದ ಕೆಲಸಮಾಡಬೇಕು. ಮುಂದಿನ ಸಭೆಯೊಳಗೆ ಎಲ್ಲರೂ ಪ್ರಗತಿ ವರದಿ ನೀಡಬೇಕು ಎಂದು ಸೂಚಿಸಿದರು.
ಯೋಜನೆಗಳ ಅರಿವು ಮೂಡಿಸಿ : ಪಿ.ಎಂ.ಸ್ವನಿಧಿ, ಎಂ.ಪಿ.ಕಿಸಾನ್, ವಿಶ್ವಕರ್ಮ, ಮುದ್ರಾ ಸೇರಿದಂತೆ ವಿವಿಧ ಯೋಜನೆಗಳ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಈ ಯೋಜನೆಗಳ ವ್ಯಾಪ್ತಿಗೆ ಬರುವ ಫಲಾನುಭವಿಗಳ ಸರ್ವೇಮಾಡಿ, ಯಾವ ಯೋಜನೆಗಳಿಗೆ ವರ್ಗವಾರು ಎಷ್ಟು ಸಾಲ, ಸಹಾಯಧನ ಸಿಗುತ್ತದೆ, ಅದಕ್ಕೆ ಬೇಕಾದ ದಾಖಲೆಗಳ ಮಾಹಿತಿ ನೀಡಬೇಕು. ಅಧಿಕಾರಿಗಳು ಕಾಳಜಿಯಿಂದ ಮಾಡಿದರೆ ಬಡವರ ಅಭಿವೃದ್ಧಿಯಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪುನಿತ್, ಬ್ಯಾಂಕ್ ಅಧಿಕಾರಿಗಳಾದ ಸೂರಜ್ ಎನ್, ನಬಾರ್ಡ್ನ ರಂಗನಾಥ್ ಹಾಗೂ ಇತರ ಬ್ಯಾಂಕ್ಗಳ ಪ್ರಾದೇಶಿಕ ಅಧಿಕಾರಿಗಳು ಉಪಸ್ಥಿತರಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 