ಗ್ರಾಪಂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಹಳಿಯಾಳ16: ಸಿಐಟಿಯು ಸಂಯೋಜಿತ ಕನರ್ಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ಹಳಿಯಾಳ ತಾಲೂಕಾ ಸಮಿತಿಯವರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದ್ದಾರೆ.
ಸಂಘಟನೆಯ ಸದಸ್ಯರು ಸದರ್ಾರ ವಲ್ಲಭಭಾಯಿ ಪಟೇಲ್ ಮಕ್ಕಳ ಉದ್ಯಾನವನದಿಂದ ಮೆರವಣಿಗೆಯ ಮೂಲಕ ತಾಲೂಕ ಪಂಚಾಯತಿಗೆ ತೆರಳಿ ಈ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆಯ ಪ್ರಧಾನ ಕಾರ್ಯದಶರ್ಿಗೆ ಬರೆದ ಮನವಿ ಪತ್ರವನ್ನು ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿ ಡಾ. ಮಹೇಶ ಕುರಿಯವರ ಅವರಿಗೆ ಸಲ್ಲಿಸಿದರು.
ಇಲಾಖೆಯ ಆದೇಶದಂತೆ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕ ಪಂಚಾಯತ ಕಾರ್ಯನಿವರ್ಾಹಕ ಅಧಿಕಾರಿ ಇವರುಗಳು ಗ್ರಾಮ ಪಂಚಾಯತಗಳಲ್ಲಿ ಕೈಬಿಟ್ಟಿರುವ ಸಿಬ್ಬಂದಿಗಳಿಗೆ ಇಎಫ್ಎಂಎಸ್ನಲ್ಲಿ ಸೇರಿಸಲು ನೌಕರರ ವಿವರವನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸದೇ ಇರುವುದು ಆಕ್ಷೇಪಣೀಯವಾಗಿದೆ. ಕೂಡಲೇ ಆದೇಶವನ್ನು ಅನುಷ್ಠಾನಗೊಳಿಸುವಂತೆ ಸೂಕ್ತ ನಿದರ್ೇಶನ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳ ಜೊತೆಗೆ ಸುಪ್ರೀಂಕೋಟರ್್ ಆದೇಶದಂತೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದನ್ನು ಜಾರಿಗೊಳಿಸಬೇಕು ಎಂದು ಕೋರಲಾಗಿದೆ.
ಸಿಐಟಿಯು ಸಂಯೋಜಿತ ಕನರ್ಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘದ ಹಳಿಯಾಳ ತಾಲೂಕಾ ಸಮಿತಿಯ ಅಧ್ಯಕ್ಷ ಟಿ.ಎಂ. ಗುರುಬಣ್ಣವರ, ಸಿಐಟಿಯು ಮುಖಂಡ ಆರ್.ಎಂ. ಮುಲ್ಲಾ ಇವರುಗಳ ನೇತೃತ್ವದಲ್ಲಿ ಪದಾಧಿಕಾರಿಗಳಾದ ಪುಂಡ್ಲೀಕ್ ಮಿರಾಶಿ, ಪ್ರಕಾಶ ದೊಡ್ಮನಿ, ರಿಯಾಜ್ ಕಿತ್ತೂರ, ನಾಮದೇವ ಕಾಮ್ರೇಕರ, ಮೋಹನ ಶಿಂಧೆ, ಚಂದ್ರಕಾಂತ ಗೌಡಾ ಮೊದಲಾದವರು ಪಾಲ್ಗೊಂಡಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 