'ಗುಂಪು ಥಳಿತ: ಕಾನೂನು ರಚಣೆಗೆ ಸಿದ್ಧ'
ನವದೆಹಲಿ 24: ಅಲ್ವಾರ್ ಗುಂಪು ಥಳಿತ ಪ್ರಕರಣದಲ್ಲಿ ಸಾವನ್ನಪ್ಪಿರುವ 28ವರ್ಷದ ಅಕ್ಬರ್ ಖಾನ್ ವಿಷಯ ಪ್ರಸ್ತಾಪಿಸಿ ಮಾತನಾಡಿದ ಗೃಹ ಸಚಿವ ರಾಜ್ ನಾಥ್ ಸಿಂಗ್, ಒಂದು ವೇಳೆ ಗುಂಪು ಥಳಿತದಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸಕರ್ಾರ ಕಾನೂನನ್ನು ರೂಪಿಸಲು ಸಿದ್ಧವಿದೆ ಎಂದು ಭರವಸೆ ನೀಡಿದರು.
ಕೇಂದ್ರ ಸಕರ್ಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ ಅವರು, ಕಾಂಗ್ರೆಸ್ 1984ರಲ್ಲಿ ನಡೆಸಿದ್ದ ಸಿಖ್ಖ್ ದಂಗೆ ಪ್ರಕರಣವನ್ನು ಉದಾಹರಿಸಿದರು. ನಾವು ಇದರ ಬಗ್ಗೆ ಚಿಂತಿಸಬೇಕಾಗಿದೆ. ಇಂತಹ ಪ್ರಕರಣ ಇತ್ತೀಚೆಗೆ ಆರಂಭವಾಗಿದ್ದಲ್ಲ. ಹಲವು ವರ್ಷಗಳ ಹಿಂದೆಯೂ ನಡೆದಿತ್ತು. ಈ ಹಿನ್ನೆಲೆಯಲ್ಲಿ 1984ರಲ್ಲಿ ನಡೆದಿರುವುದು ಅತೀ ದೊಡ್ಡ ಗುಂಪು ಥಳಿತ ಘಟನೆಯಾಗಿದೆ ಎಂದು ಸಿಂಗ್ ಹೇಳಿದರು.
ಅಲ್ವಾರ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಅಷ್ಟೇ ಅಲ್ಲ ಯಾರು ದೋಷಿ ಎಂದು ಸಾಬೀತಾಗುತ್ತದೋ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದರು. ನಾಲ್ಕು ವಾರಗಳಲ್ಲಿ ಸಮಿತಿ ವರದಿಯನ್ನು ನೀಡಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 