'ಗುಂಪು ಥಳಿತ: ಕಾನೂನು ರಚಣೆಗೆ ಸಿದ್ಧ'
ನವದೆಹಲಿ 24: ಅಲ್ವಾರ್ ಗುಂಪು ಥಳಿತ ಪ್ರಕರಣದಲ್ಲಿ ಸಾವನ್ನಪ್ಪಿರುವ 28ವರ್ಷದ ಅಕ್ಬರ್ ಖಾನ್ ವಿಷಯ ಪ್ರಸ್ತಾಪಿಸಿ ಮಾತನಾಡಿದ ಗೃಹ ಸಚಿವ ರಾಜ್ ನಾಥ್ ಸಿಂಗ್, ಒಂದು ವೇಳೆ ಗುಂಪು ಥಳಿತದಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸಕರ್ಾರ ಕಾನೂನನ್ನು ರೂಪಿಸಲು ಸಿದ್ಧವಿದೆ ಎಂದು ಭರವಸೆ ನೀಡಿದರು.
ಕೇಂದ್ರ ಸಕರ್ಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ ಅವರು, ಕಾಂಗ್ರೆಸ್ 1984ರಲ್ಲಿ ನಡೆಸಿದ್ದ ಸಿಖ್ಖ್ ದಂಗೆ ಪ್ರಕರಣವನ್ನು ಉದಾಹರಿಸಿದರು. ನಾವು ಇದರ ಬಗ್ಗೆ ಚಿಂತಿಸಬೇಕಾಗಿದೆ. ಇಂತಹ ಪ್ರಕರಣ ಇತ್ತೀಚೆಗೆ ಆರಂಭವಾಗಿದ್ದಲ್ಲ. ಹಲವು ವರ್ಷಗಳ ಹಿಂದೆಯೂ ನಡೆದಿತ್ತು. ಈ ಹಿನ್ನೆಲೆಯಲ್ಲಿ 1984ರಲ್ಲಿ ನಡೆದಿರುವುದು ಅತೀ ದೊಡ್ಡ ಗುಂಪು ಥಳಿತ ಘಟನೆಯಾಗಿದೆ ಎಂದು ಸಿಂಗ್ ಹೇಳಿದರು.
ಅಲ್ವಾರ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಅಷ್ಟೇ ಅಲ್ಲ ಯಾರು ದೋಷಿ ಎಂದು ಸಾಬೀತಾಗುತ್ತದೋ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದರು. ನಾಲ್ಕು ವಾರಗಳಲ್ಲಿ ಸಮಿತಿ ವರದಿಯನ್ನು ನೀಡಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 