'ಗುಂಪು ಥಳಿತ: ಕಾನೂನು ರಚಣೆಗೆ ಸಿದ್ಧ'
ನವದೆಹಲಿ 24: ಅಲ್ವಾರ್ ಗುಂಪು ಥಳಿತ ಪ್ರಕರಣದಲ್ಲಿ ಸಾವನ್ನಪ್ಪಿರುವ 28ವರ್ಷದ ಅಕ್ಬರ್ ಖಾನ್ ವಿಷಯ ಪ್ರಸ್ತಾಪಿಸಿ ಮಾತನಾಡಿದ ಗೃಹ ಸಚಿವ ರಾಜ್ ನಾಥ್ ಸಿಂಗ್, ಒಂದು ವೇಳೆ ಗುಂಪು ಥಳಿತದಂತಹ ಘಟನೆಗಳನ್ನು ತಡೆಯುವ ನಿಟ್ಟಿನಲ್ಲಿ ಕೇಂದ್ರ ಸಕರ್ಾರ ಕಾನೂನನ್ನು ರೂಪಿಸಲು ಸಿದ್ಧವಿದೆ ಎಂದು ಭರವಸೆ ನೀಡಿದರು.
ಕೇಂದ್ರ ಸಕರ್ಾರ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿರುವುದಾಗಿ ತಿಳಿಸಿದ ಅವರು, ಕಾಂಗ್ರೆಸ್ 1984ರಲ್ಲಿ ನಡೆಸಿದ್ದ ಸಿಖ್ಖ್ ದಂಗೆ ಪ್ರಕರಣವನ್ನು ಉದಾಹರಿಸಿದರು. ನಾವು ಇದರ ಬಗ್ಗೆ ಚಿಂತಿಸಬೇಕಾಗಿದೆ. ಇಂತಹ ಪ್ರಕರಣ ಇತ್ತೀಚೆಗೆ ಆರಂಭವಾಗಿದ್ದಲ್ಲ. ಹಲವು ವರ್ಷಗಳ ಹಿಂದೆಯೂ ನಡೆದಿತ್ತು. ಈ ಹಿನ್ನೆಲೆಯಲ್ಲಿ 1984ರಲ್ಲಿ ನಡೆದಿರುವುದು ಅತೀ ದೊಡ್ಡ ಗುಂಪು ಥಳಿತ ಘಟನೆಯಾಗಿದೆ ಎಂದು ಸಿಂಗ್ ಹೇಳಿದರು.
ಅಲ್ವಾರ್ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ಅಷ್ಟೇ ಅಲ್ಲ ಯಾರು ದೋಷಿ ಎಂದು ಸಾಬೀತಾಗುತ್ತದೋ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಕೇಂದ್ರ ಗೃಹ ಕಾರ್ಯದಶರ್ಿ ರಾಜೀವ್ ಗೌಬ್ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ ಎಂದರು. ನಾಲ್ಕು ವಾರಗಳಲ್ಲಿ ಸಮಿತಿ ವರದಿಯನ್ನು ನೀಡಬೇಕೆಂದು ಸೂಚಿಸಲಾಗಿದೆ ಎಂದು ತಿಳಿಸಿದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 