‘ರುದ್ರ ಪಠಣದ’ ಗುರುವಂದನಾ ಕಾರ್ಯಕ್ರಮ
Guru Vandana program: Dharwad
ಧಾರವಾಡ 17: ಮಹಿಳೆಯರು ದಿನನಿತ್ಯ ರುದ್ರಪಠಣ ಮಾಡುವುದರಿಂದ 32 ಕಿ.ಮೀ ದೂರದಷ್ಟು ಸಕಾರಾತ್ಮಕ ಶಕ್ತಿ ಪಸರಿಸುತ್ತದೆ ಮತ್ತು ಇದರ ಮಹತ್ವ ಅಗಾಧವಾಗಿದೆ ಎಂದು ಮಂಗಳಾ ಮಠದ ಹೇಳಿದರು.
ಅವರು ರೆವಿನ್ಯೂ ಕಾಲನಿಯ ಸಿದ್ಧಾರೂಢ ಮಠದ ಸಭಾಭವನದಲ್ಲಿ ತರಂಗಿಣಿ ಮಹಿಳಾ ಮಂಡಳದ ಸದಸ್ಯೆಯರು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.
ಆಧುನಿಕ ದಿನಮಾನಗಳಲ್ಲಿ ಮಹಿಳೆಯರು ತುಂಬಾ ಜಾಗರೂಕತೆ ವಹಿಸಬೇಕು. ನಿರಂತರ ಅಧ್ಯಯನ ಮಾಡುವುದರಿಂದ ದೈವಿಕ ಶಕ್ತಿ ಹೆಚ್ಚುತ್ತದೆ ಎಂದು ಮಠದ ಅಭಿಪ್ರಾಯಪಟ್ಟರು.
ಕವಿತಾ ಹಿರೇಮಠ ಅತಿಥಿಯಾಗಿ ಮಾತನಾಡಿದರು. ರೇಣು ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀ ಮನ್ನಿಕೇರಿ ಮತ್ತು ತಂಡದವರು ಪ್ರಾರ್ಥನೆ ನಡೆಸಿಕೊಟ್ಟರು. ಪ್ರಾಸ್ತಾವಿಕವಾಗಿ ವಿಜಯಲಕ್ಷ್ಮಿ ಹಿರೇಮಠ ಮಾತನಾಡಿದರು. ಜ್ಯೋತಿ ಬಳಿಗಾರ ವಂದಿಸಿದರು. ತರಂಗಿಣಿ ಮಹಿಳಾ ಮಂಡಳದ ಸದಸ್ಯೆಯರೆಲ್ಲರೂ ಭಾಗವಹಿಸಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 