‘ರುದ್ರ ಪಠಣದ’ ಗುರುವಂದನಾ ಕಾರ್ಯಕ್ರಮ
Guru Vandana program: Dharwad
ಧಾರವಾಡ 17: ಮಹಿಳೆಯರು ದಿನನಿತ್ಯ ರುದ್ರಪಠಣ ಮಾಡುವುದರಿಂದ 32 ಕಿ.ಮೀ ದೂರದಷ್ಟು ಸಕಾರಾತ್ಮಕ ಶಕ್ತಿ ಪಸರಿಸುತ್ತದೆ ಮತ್ತು ಇದರ ಮಹತ್ವ ಅಗಾಧವಾಗಿದೆ ಎಂದು ಮಂಗಳಾ ಮಠದ ಹೇಳಿದರು.
ಅವರು ರೆವಿನ್ಯೂ ಕಾಲನಿಯ ಸಿದ್ಧಾರೂಢ ಮಠದ ಸಭಾಭವನದಲ್ಲಿ ತರಂಗಿಣಿ ಮಹಿಳಾ ಮಂಡಳದ ಸದಸ್ಯೆಯರು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.
ಆಧುನಿಕ ದಿನಮಾನಗಳಲ್ಲಿ ಮಹಿಳೆಯರು ತುಂಬಾ ಜಾಗರೂಕತೆ ವಹಿಸಬೇಕು. ನಿರಂತರ ಅಧ್ಯಯನ ಮಾಡುವುದರಿಂದ ದೈವಿಕ ಶಕ್ತಿ ಹೆಚ್ಚುತ್ತದೆ ಎಂದು ಮಠದ ಅಭಿಪ್ರಾಯಪಟ್ಟರು.
ಕವಿತಾ ಹಿರೇಮಠ ಅತಿಥಿಯಾಗಿ ಮಾತನಾಡಿದರು. ರೇಣು ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀ ಮನ್ನಿಕೇರಿ ಮತ್ತು ತಂಡದವರು ಪ್ರಾರ್ಥನೆ ನಡೆಸಿಕೊಟ್ಟರು. ಪ್ರಾಸ್ತಾವಿಕವಾಗಿ ವಿಜಯಲಕ್ಷ್ಮಿ ಹಿರೇಮಠ ಮಾತನಾಡಿದರು. ಜ್ಯೋತಿ ಬಳಿಗಾರ ವಂದಿಸಿದರು. ತರಂಗಿಣಿ ಮಹಿಳಾ ಮಂಡಳದ ಸದಸ್ಯೆಯರೆಲ್ಲರೂ ಭಾಗವಹಿಸಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 