‘ರುದ್ರ ಪಠಣದ’ ಗುರುವಂದನಾ ಕಾರ್ಯಕ್ರಮ
Guru Vandana program: Dharwad
ಧಾರವಾಡ 17: ಮಹಿಳೆಯರು ದಿನನಿತ್ಯ ರುದ್ರಪಠಣ ಮಾಡುವುದರಿಂದ 32 ಕಿ.ಮೀ ದೂರದಷ್ಟು ಸಕಾರಾತ್ಮಕ ಶಕ್ತಿ ಪಸರಿಸುತ್ತದೆ ಮತ್ತು ಇದರ ಮಹತ್ವ ಅಗಾಧವಾಗಿದೆ ಎಂದು ಮಂಗಳಾ ಮಠದ ಹೇಳಿದರು.
ಅವರು ರೆವಿನ್ಯೂ ಕಾಲನಿಯ ಸಿದ್ಧಾರೂಢ ಮಠದ ಸಭಾಭವನದಲ್ಲಿ ತರಂಗಿಣಿ ಮಹಿಳಾ ಮಂಡಳದ ಸದಸ್ಯೆಯರು ಹಮ್ಮಿಕೊಂಡ ಗುರುವಂದನಾ ಕಾರ್ಯಕ್ರಮದಲ್ಲಿ ಗೌರವ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.
ಆಧುನಿಕ ದಿನಮಾನಗಳಲ್ಲಿ ಮಹಿಳೆಯರು ತುಂಬಾ ಜಾಗರೂಕತೆ ವಹಿಸಬೇಕು. ನಿರಂತರ ಅಧ್ಯಯನ ಮಾಡುವುದರಿಂದ ದೈವಿಕ ಶಕ್ತಿ ಹೆಚ್ಚುತ್ತದೆ ಎಂದು ಮಠದ ಅಭಿಪ್ರಾಯಪಟ್ಟರು.
ಕವಿತಾ ಹಿರೇಮಠ ಅತಿಥಿಯಾಗಿ ಮಾತನಾಡಿದರು. ರೇಣು ಹಿರೇಮಠ ಕಾರ್ಯಕ್ರಮ ನಿರೂಪಿಸಿದರು. ಲಕ್ಷ್ಮೀ ಮನ್ನಿಕೇರಿ ಮತ್ತು ತಂಡದವರು ಪ್ರಾರ್ಥನೆ ನಡೆಸಿಕೊಟ್ಟರು. ಪ್ರಾಸ್ತಾವಿಕವಾಗಿ ವಿಜಯಲಕ್ಷ್ಮಿ ಹಿರೇಮಠ ಮಾತನಾಡಿದರು. ಜ್ಯೋತಿ ಬಳಿಗಾರ ವಂದಿಸಿದರು. ತರಂಗಿಣಿ ಮಹಿಳಾ ಮಂಡಳದ ಸದಸ್ಯೆಯರೆಲ್ಲರೂ ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 