ಬಿಂಕದಕಟ್ಟಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ ಕೆ ಪಾಟೀಲ ಭೂಮಿ ಪೂಜೆ
H.K. Patil Bhoomi Puja for various development works in Binkadakatti
ಗದಗ 17: ಗದಗ ತಾಲೂಕಿನ ಬಿಂಕದಕಟ್ಟಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ಅಂದಾಜು 25 ಲಕ್ಷ ರೂಗಳ ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿ ನಿರ್ಮಾಣ, ತಾರಿಕೊಪ್ಪದವರ ಹೊಲದ ಹತ್ತಿರ 25 ಲಕ್ಷ ರೂಗಳ ವೆಚ್ಚದಲ್ಲಿ ಗಟಾರು ಹಾಗೂ ಸಿಡಿ ನಿರ್ಮಾಣ, 15 ಲಕ್ಷ ರೂಗಳ ವೆಚ್ಚದಲ್ಲಿ ಶಾಂಬರ ರಸ್ತೆಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕಾನೂನು ಹಾಗೂ ಸಂಸರದೀಯ ವ್ಯವಹಾರಗಳ ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್ ಕೆ ಪಾಟೀಲ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ರಾಮೀಣ ಭಾಗದಲ್ಲಿ ನಿರ್ಮಾಣವಾಗುತ್ತಿರುವ ಅಭಿವೃದ್ಧಿ ಕಾರ್ಮಿಕ ಕಾಮಗಾರಿಗಳಿಂದ ಗ್ರಾಮಗಳು ಸುಂದರ ಹಾಗೂ ಅಭಿವೃದ್ಧಿ ಪಥದತ್ತ ಸಾಗುವ ಲ್ಲಿ ಮಹತ್ವದ ಹೆಜ್ಜೆಗೆ ನೀಡುತ್ತಿವೆ ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಮಾದರಿಯಾಗಿ ತನ್ನ ವಿನೂತನ ಕಾರ್ಯಕ್ರಮಗಳ ಮೂಲಕ ವಿಶೇಷತೆಯನ್ನು ಹೊಂದಿರುವ ಬಿಂಕದಕಟ್ಟಿ ಗ್ರಾಮ ಪಂಚಾಯಿತಿ ಇನ್ನು ಹೆಚ್ಚು ಅಭಿವೃದ್ಧಿಗೊಳ್ಳಲು ಎಲ್ಲರೂ ರಚನಾತ್ಮಕ ಕಾರ್ಯಗಳಲ್ಲಿ ಕೈಜೋಡಿಸುವ ಮೂಲಕ ಗ್ರಾಮದ ಬೆಳವಣಿಗೆಗೆ ಸಹಕಾರಿ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಆನಂದಸ್ವಾಮಿ ಗಡ್ಡದ್ದೇವರಮಠ, ರವಿ ಮೂಲಿಮನಿ, ಅಪ್ಪಣ್ಣ ಇನಾಮತಿ, ಸಿಬಿ ದೊಡ್ಡಗೌಡ್ರೆ, ಬಿ ಆರ್ ದೇವರೆಡ್ಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ನಿಂಗಪ್ಪ ಪರ್ಪನವರ, ಉಪಾಧ್ಯಕ್ಷ ದ್ಯಾಮವ್ವ ಆರಟ್ಟಿ ಸದಸ್ಯರಾದ ತರದರೆಡ್ಡಿ ರಂಗಪ್ಪನವರ, ಪತ್ತೆ ಸಾಬ ನದಾಫ, ವೆಂಕಟೇಶ್ ಕುನಿ, ಮಂಜುನಾಥ ಮಕಳಿ, ಭೀಮವ್ವ ಬೇವಿನಕಟ್ಟಿ, ಲಕ್ಷ್ಮಿ ಮೂಲಿಮನಿ, ತುಳಸ ತಿಮ್ಮನ ಗೌಡ್ರ, ಜೈ ಬುನಬಿ ಸೋನೆ ಖಾನವರ, ಅಶೋಕ ಕರೂರ, ದೇವೇಂದ್ರ ಗೌಡ್ರು ಕರಿ ಗೌಡ್ರ ಗಾಯತ್ರಿ ಖಾನಾಪುರ, ಗಂಗವ್ವ ತಡಿಸಿ ಸೇರಿದಂತೆ ಗ್ರಾಮದ ಮುಖಂಡರು ಜನಪ್ರತಿನಿಧಿಗಳು ಅಧಿಕಾರಿಗಳು ಉಪಸ್ಥಿತರಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 