ಹೊಳಗುಂದಿ ಸಿದ್ದೇಶ್ವರ ಸ್ವಾಮಿ ರಥೋತ್ಸವ
Halgundi Siddeshwar Swami Rathotsava
ಹೊಳಗುಂದಿ ಸಿದ್ದೇಶ್ವರ ಸ್ವಾಮಿ ರಥೋತ್ಸವ
ಹೂವಿನಹಡಗಲಿ 17: ತಾಲ್ಲೂಕಿನ ಹೊಳಗುಂದಿ ಗ್ರಾಮದ ಸಿದ್ದೇಶ್ವರ ಸ್ವಾಮಿಯ ರಥೋತ್ಸವ ಶುಕ್ರವಾರ ಸಂಜೆ ಸಂಭ್ರಮದಿಂದ ನೆರವೇರಿತು ದೇವಾಲಯ ದಿಂದ ಪಲಕ್ಕಿಯ ಭವ್ಯ ಮೆರವಣಿಗೆಯಲ್ಲಿ ಸ್ವಾಮಿಯ ಉತ್ಸವ ಮೂರ್ತಿ ತಂದು ರಥಕ್ಕೆ ಪ್ರದಕ್ಷಿಣೆ ಹಾಕಲಾಯಿತು. ನಾನಾ ಬಗೆಯ ಹೂಮಾಲೆ, ತಳಿರು ತೋರಣಗಳಿಂದ ಅಲಂಕರಿಸಿದ್ದ ಗಡ್ಡಿ ತೇರಿಗೆ ಸಾಂಪ್ರದಾಯಿಕ ವಿಧಿ ವಿಧಾನಗಳಿಂದ ಪೂಜೆ, ಮಹಾಮಂಗಳಾರತಿ ನೆರವೇರಿಸಿದರು.ಸಿದ್ದೇಶ್ವರ ಸ್ವಾಮಿ ಜಯಘೋಷ ಹರ್ಷೋದ್ಗಾರ ನಡುವೆ ರಥೋತ್ಸವ ವನ್ನು ಎಳೆಯಲಾಯಿತು. ಭಕ್ತರು ಬಾಳೆಹಣ್ಣು. ಉತ್ತತ್ತಿ ಎಸೆದು ಭಕ್ತಿ ಮೆರೆದರು.ಸಮಾಳ.ನಂದಿಕೋಲು.ಮಂಗಳವಾದ್ಯಗಳು ರಥೋತ್ಸವಕ್ಕೆ ಮೆರುಗು ತಂದವು. ಹೂವಿನಹಡಗಲಿ. ಉತ್ತಂಗಿ. ಇಟ್ಟಿಗಿ.ಮೋರಗೇರಿ. ನಂದಿಹಳ್ಳಿ.ಸೋಗಿ.ಬನ್ನಿಕಲ್ಲು ಸೇರಿದಂತೆ ಭಕ್ತರು ಭಾಗಿಯಾಗಿದ್ದರು. ಇದಕ್ಕೂ ಮುನ್ನ ಸ್ವಾಮಿಯ ನಿಶಾನೆ ನಿವ್ರತ್ತ ಪ್ರಾಚಾರ್ಯ ಎಂ.ಎಂ.ಗುರುಬಸವರಾಜ ಅವರಿಗೆ 210.101 ರೂ. ಪಡೆದರು.ಜಾತ್ರೆಯ ನಿಮಿತ್ತ ಸ್ಥಳೀಯ ಕಲಾವಿದರಿಂದ ಎರಡು ನಾಟಕಗಳು ಪ್ರದರ್ಶನಗೊಂಡವು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 