ಹರಪನಹಳ್ಳಿ: ನಾಡ ಕಚೇರಿಗೆ ಬೀಗ ಜಡಿದು ಪ್ರತಿಭಟನೆ
ಲೋಕದರ್ಶನ ವರದಿ
ಹರಪನಹಳ್ಳಿ 26: ತಾಲೂಕಿನ ಅರಸೀಕೆರೆ ಗ್ರಾಮದ ಕಂದಾಯ ಇಲಾಖೆಯ ನಾಡ ಕಚೇರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರು ಕಂಪ್ಯೂಟರ್ ಸೇರಿದಂತೆ ಪೀಠೋಪಕರಣಗಳನ್ನು ಕಚೇರಿಯೀಂದ ಹೊರಗಿಟ್ಟು ಬೀಗ ಜಡಿದು ಪ್ರತಿಭಟನೆ ನಡೆಸಿದರು.
ತಾಲೂಕಿನಲ್ಲಿಯೇ ಅತಿ ದೊಡ್ಡ ಹೋಬಳಿ ಎಂಬ ಖ್ಯಾತಿ ಪಡೆದುಕೊಂಡಿರುವ ಅರಸೀಕೆರೆಗೆ 72 ಹಳ್ಳಿಗಳು ವ್ಯಾಪ್ತಿಗೆ ಬರುತ್ತವೆ. ಆದರೆ ಸರ್ಕಾರದ ಯಾವುದೇ ಯೋಜನೆಗಳು ಜಾರಿಯಾದರೂ ಸವಲತ್ತುಗಳನ್ನು ಪಡೆಯಲು ನಿತ್ಯ ಸಾವಿರಾರು ಜನ ನಾಡ ಕಚೇರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಪಹಣಿ, ಆಧಾರ್ ಕಾರ್ಡ ತಿದ್ದುಪಡಿ, ಹೈ.ಕ ಪ್ರಮಾಣ ಪತ್ರ ಪಡೆಯಲು ಆಗಮಿಸುತ್ತಾರೆ. ಆದರೆ ನಾಡ ಕಚೇರಿಗೆ ಮೂಲ ಸೌಕರ್ಯ ಕೊರತೆಯಿಂದಾಗಿ ಸೌಲಭ್ಯ ಪಡೆಯಲು ನಿತ್ಯ ಅಲೆಡಾಡುವಂತಾಗಿದೆ. ಕೂಡಲೇ ನಾಡ ಕಚೇರಿಗೆ ಅಗತ್ಯವಿರುವ ಗಣಕಯಂತ್ರ, ಪ್ರಿಂಟರ್ ಒದಗಿಸುವಂತೆ ಒತ್ತಾಯಿಸಿದರು.
ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಡಾ.ನಾಗವೇಣಿ ಅವರು, ಕೆಟ್ಟು ಹೋಗಿದ್ದ ಪ್ರಿಂಟರ್ನ ಬದಲಾಗಿ ಹೊಸ ಪ್ರಿಂಟರ್ ವ್ಯವಸ್ಥೆ ಮಾಡಿದರು. ಆಧಾರ್ ಕಾರ್ಡ ತಿದ್ದುಪಡಿಗೆ ನಾಳೆಯಿಂದಲೇ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು. ಸಾರ್ವಜನಿಕರ ಕುಂದು ಕೊರತೆ ಬಗೆಹರಿಸುವ ನಿಟ್ಟಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳು ಸೇರಿದಂತೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಅಧಿಕಾರಿಗಳ ಸಭೆಯನ್ನು ಕರೆದು ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.
ವಿವಿಧ ಸಂಘಟನೆಯ ಮುಖಂಡರಾದ ಗುಡಿಹಳ್ಳಿ ಹಾಲೇಶ್, ಟಿ.ವೆಂಕಟೇಶ್, ಬುದಾಳ್ ಮರಿಯಪ್ಪ, ಎಂ. ಹನುಮಂತಪ್ಪ, ಕಬ್ಬಳ್ಳಿ ಬಸವರಾಜ್, ನಾಗರಾಜ್, ಕಬ್ಬಳ್ಳಿ ಪರಸಪ್ಪ, ಚಂದ್ರಪ್ಪ, ಅಂಜಿನಪ್ಪ, ಪಲ್ಲವಿ, ಸಿದ್ದಲಿಂಗಪ್ಪ, ರೋಜಾ, ಮಂಜಪ್ಪ, ವಿಜಯಚಾರಿ, ಗ್ರಾಮ ಲೆಕ್ಕಾಧಿಕಾರಿಗಳಾದ ಮಂಜುನಾಥ್, ಪ್ರಕಾಶ್, ಶ್ರೀಕಾಂತ್ ಮತ್ತಿತರರು ಭಾಗವಹಿಸಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 