ದ್ವೇಷ ಭಾಷಣ ಕಾಯ್ದೆ : ಸಂವಿಧಾನ ಹಕ್ಕು ಕಸಿಯುವ ಪ್ರಯತ್ನ

ದ್ವೇಷ ಭಾಷಣ ಕಾಯ್ದೆ : ಸಂವಿಧಾನ ಹಕ್ಕು ಕಸಿಯುವ ಪ್ರಯತ್ನ Hate Speech Act: An attempt to take away constitutional rights

ಹೂವಿನಹಡಗಲಿ 08:  ಸರ್ಕಾರವನ್ನು ಟೀಕಿಸುವ ಮತ್ತು ವೈಫಲ್ಯಗಳ ವಿರುದ್ಧ ಧ್ವನಿ ಎತ್ತುವವರ ಬಾಯಿ ಮುಚ್ಚಿಸಲು ದ್ವೇಷ ಭಾಷಣ ಕಾಯ್ದೆ ಜಾರಿಗೆ ತಂದಿದೆ. ಇದು ವಿರೋಧ ಪಕ್ಷಗಳ ಸಾಂವಿಧಾನಿಕ ಹಕ್ಕು ಕಸಿಯುವ ಪ್ರಯತ್ನ’ ಎಂದು ಶಾಸಕ ಕೃಷ್ಣನಾಯಕ ಆರೋಪಿಸಿದರು.ಪಟ್ಟಣದಲ್ಲಿ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರುಬಳ್ಳಾರಿಯಲ್ಲಿ ನಡೆದ ಗಲಭೆ, ಗೂಂಡಾಗಿರಿ ಪ್ರಕರಣ ಪ್ರಜಾಪ್ರಭುತ್ವದ ಕಗ್ಗೋಲೆ ಹೀನ ಕೃತ್ಯವಾಗಿದೆ. ಮಾಜಿ ಸಚಿವ, ಹಿರಿಯ ಶಾಸಕ ಜನಾರ್ದನರೆಡ್ಡಿ ಅವರ ಮನೆಗೆ ನುಗ್ಗಿ ದಾಂಧಲೆ ನಡೆಸಿರುವುದನ್ನು ತೀವ್ರವಾಗಿ ಖಂಡಿಸಿದರು. ’ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ವ್ಯಕ್ತಿಯ ಜೀವ ತೆಗೆದವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು. ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಜತೆಗೆ ಶಾಂತಿ, ಸುವ್ಯವಸ್ಥೆ ಕಾಪಾಡಬೇಕು’ ಎಂದು ಒತ್ತಾಯಿಸಿದರು.