ಹಾವೇರಿ ಜಿಲ್ಲಾ ದೇವಾಂಗ ಸಂಘ: ಪ್ರತಿಭಾ ಪುರಸ್ಕಾರ, ನಿವೃತ್ತ ನೌಕರರ ಸನ್ಮಾನ
Haveri District Devanga Sangha: Talent Award, Retired Employees Honored
ರಾಣೆಬೆನ್ನೂರು 21 : ಇಲ್ಲಿನ ಸಿದ್ದೇಶ್ವರ ನಗರದ ಕಾಕಿ ಜನ ಸೇವಾ ಸಂಸ್ಥೆ ಗಣೇಶೋತ್ಸವ( ನೀಲಕಂಠೇಶ್ವರ ದೇವಸ್ಥಾನ) ಮಂಟಪದಲ್ಲಿ, ಡಿಸೆಂಬರ್ 25, 2025 ರಂದು ಮುಂಜಾನೆ 10:30 ಗಂಟೆಗೆ ಹಾವೇರಿ ಜಿಲ್ಲಾ ದೇವಾಂಗ ಸಂಘವು, ಶೈಕ್ಷಣಿಕ ಪ್ರತಿಭಾವಂತ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ, ವಯೋವೃದ್ಧರು ಮತ್ತು ನಿವೃತ್ತ ನೌಕರರ ಅಭಿನಂದನಾ ಸನ್ಮಾನ ನಡೆಯಲಿದೆ. ಎಂದು ಗೌರವಾಧ್ಯಕ್ಷ ಸಂಕಪ್ಪ ಮಾರನಾಳ, ಅಧ್ಯಕ್ಷ ಬಸವರಾಜ ಮೈಲಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಸ್ವಾಮಿ ಶ್ರೀ ಪ್ರಕಾಶಾನಂದಜಿ ಅವರು ದಿವ್ಯ ಸಾನಿಧ್ಯ ವಹಿಸುವರು. ಸಂಘದ ಅಧ್ಯಕ್ಷ ಬಸವರಾಜ ಮೈಲಾರ ಅಧ್ಯಕ್ಷತೆ ವಹಿಸುವರು. ರಾಜ್ಯ ದೇವಾಂಗ ಸಂಘದ ಅಧ್ಯಕ್ಷ ರವೀಂದ್ರ ಕಲಬುರ್ಗಿ ಸಮಾರಂಭ ಉದ್ಘಾಟಿಸುವರು. ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ ರಾಜೇಶ್, ನಾರಾಯಣಪ್ಪ ಮಂಡಕ್ಕಿ, ಮಾಜಿ ಶಾಸಕ ಅರುಣಕುಮಾರ ಪೂಜಾರ್, ಖ್ಯಾತ ನೆತ್ರ ಡಾ. ಚಂದ್ರಶೇಖರ್ ಕೇಲಗಾರ, ಲಕ್ಷ್ಮಿಕಾಂತ್ ಹುಲಗೂರ, ಸಂಕಪ್ಪ ಮಾರನಾಳ, ವಸಂತ ಕುಂಚೂರ, ಗಣೇಶ ಹಾವನೂರ ಮತ್ತಿತರರು ಪಾಲ್ಗೊಳ್ಳುವರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 