ಆರೋಗ್ಯ ಇಲಾಖೆಯ ನೌಕರರು ಹಾಗೂ ವೈದ್ಯಾಧಿಕಾರಿಗಳ ಮುಷ್ಕರ
Health Department employees and medical officers go on strike
ಜಮಖಂಡಿ 28 : ತಾಲೂಕಾ ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ, ವೈದ್ಯಾಧಿಕಾರಿಗಳ ಸಂಘದ ಸಹಯೋಗದಲ್ಲಿ ಮಾ 11 ರಿಂದ ಅನಿರ್ಧಿಷ್ಠಾವಧಿಯ ಮುಷ್ಕರ ನಡೆಸಲಾಗುವದೆಂದು ತಾಲೂಕಾ ಆರೋಗ್ಯ ಇಲಾಖೆಯ ಅಧಿಕಾರಿ ಗೈಬುಸಾಬ ಗಲಗಲಿ ಅವರು ಹೇಳಿದರು.
ನಗರದ ತಾಲೂಕಾಡಳಿತ ಸೌಧದ ಆವರಣದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹಾಗೂ ತಹಸೀಲ್ದಾರ ಅನೀಲ ಬಡಿಗೇರ ಅವರಿಗೆ ಪ್ರತ್ಯೇಕವಾಗಿ ಮನವಿ ಸಲಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ನೌಕರರು ಹಾಗೂ ವೈದ್ಯಾಧಿಕಾರಿಗಳ ನ್ಯಾಯಯುತ ನಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸಲಾಗುತ್ತಿದ್ದು. ಮಾ 11 ರಿಂದ 15 ವರೆಗೆ ಐದು ದಿನಗಳವರೆಗೆ ಕಪ್ಪು ಬಟ್ಟೆ ಧರಿಸಿ ತುರ್ತು ಸೇವೆಗಳನ್ನು ಒದಗಿಸಲಾಗುವದು, ಮಾ 16 ರಿಂದ ಬೇಡಿಕೆಗಳು ಈಡೇರುವ ವರೆಗೆ ಕರ್ತವ್ಯಕ್ಕೆ ಹಾಜರಾಗದೇ ಅನಿರ್ಧಿಷ್ಠಾವಧಿಯ ಮುಷ್ಕರ ನಡೆಸಲಾಗುವದೆಂದು ಎಂದರು.
ಇದೇ ಸಂದರ್ಭದಲ್ಲಿ ಡಾ.ಕೃಷ್ಣಾ ಬಣ್ಣದ, ಮುಖ್ಯ ವೈದ್ಯಾಧಿಕಾರಿ ಡಾ.ವಾಸಪ್ಪ ಮುದಿಗೌಡರ, ಡಾ.ಮುಕುಂದ ಕಾಂಬಳೆ, ಸಿಬ್ಬಂದಿಗಳಾದ ನರೇಂದ್ರಕುಮಾರ ನಿಡೋಣಿ, ಅನೀಲಕುಮಾರ ಸುರಗೊಂಡ, ಉಮೇಶ ಜೋಶಿ, ಸಂತೋಷ ನಾಯಕ, ರವಿ ಕಾಂಬಳೆ, ಜಾಕೀರ ನದಾಫ, ಜೆ,ಡಿ.ಧನ್ನೂರ, ಲಲಿತಾ ಗಲಗಲಿ, ಜಗದೀಶ ಆಲಕನೂರ, ಶಶಿಕಾಂತ ಮಾಲಗತ್ತಿಮಠ, ವಿಶ್ವನಾಥ ಹರಿಜನ, ಬಾಣಪ್ಪ ನಾಗಠಾಣ, ಗಂಗಾಧರ ಚಾಬುಕಸವಾರ ಸೇರಿದಂತೆ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 