ಆರೋಗ್ಯ ಇಲಾಖೆಯ ನೌಕರರು ಹಾಗೂ ವೈದ್ಯಾಧಿಕಾರಿಗಳ ಮುಷ್ಕರ
Health Department employees and medical officers go on strike
ಜಮಖಂಡಿ 28 : ತಾಲೂಕಾ ಆರೋಗ್ಯ ಇಲಾಖೆ, ವೈದ್ಯಾಧಿಕಾರಿಗಳು, ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ, ವೈದ್ಯಾಧಿಕಾರಿಗಳ ಸಂಘದ ಸಹಯೋಗದಲ್ಲಿ ಮಾ 11 ರಿಂದ ಅನಿರ್ಧಿಷ್ಠಾವಧಿಯ ಮುಷ್ಕರ ನಡೆಸಲಾಗುವದೆಂದು ತಾಲೂಕಾ ಆರೋಗ್ಯ ಇಲಾಖೆಯ ಅಧಿಕಾರಿ ಗೈಬುಸಾಬ ಗಲಗಲಿ ಅವರು ಹೇಳಿದರು.
ನಗರದ ತಾಲೂಕಾಡಳಿತ ಸೌಧದ ಆವರಣದಲ್ಲಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹಾಗೂ ತಹಸೀಲ್ದಾರ ಅನೀಲ ಬಡಿಗೇರ ಅವರಿಗೆ ಪ್ರತ್ಯೇಕವಾಗಿ ಮನವಿ ಸಲಿಸಿದರು. ನಂತರ ಮಾತನಾಡಿದ ಅವರು, ಆರೋಗ್ಯ ಇಲಾಖೆಯ ನೌಕರರು ಹಾಗೂ ವೈದ್ಯಾಧಿಕಾರಿಗಳ ನ್ಯಾಯಯುತ ನಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರ ನಡೆಸಲಾಗುತ್ತಿದ್ದು. ಮಾ 11 ರಿಂದ 15 ವರೆಗೆ ಐದು ದಿನಗಳವರೆಗೆ ಕಪ್ಪು ಬಟ್ಟೆ ಧರಿಸಿ ತುರ್ತು ಸೇವೆಗಳನ್ನು ಒದಗಿಸಲಾಗುವದು, ಮಾ 16 ರಿಂದ ಬೇಡಿಕೆಗಳು ಈಡೇರುವ ವರೆಗೆ ಕರ್ತವ್ಯಕ್ಕೆ ಹಾಜರಾಗದೇ ಅನಿರ್ಧಿಷ್ಠಾವಧಿಯ ಮುಷ್ಕರ ನಡೆಸಲಾಗುವದೆಂದು ಎಂದರು.
ಇದೇ ಸಂದರ್ಭದಲ್ಲಿ ಡಾ.ಕೃಷ್ಣಾ ಬಣ್ಣದ, ಮುಖ್ಯ ವೈದ್ಯಾಧಿಕಾರಿ ಡಾ.ವಾಸಪ್ಪ ಮುದಿಗೌಡರ, ಡಾ.ಮುಕುಂದ ಕಾಂಬಳೆ, ಸಿಬ್ಬಂದಿಗಳಾದ ನರೇಂದ್ರಕುಮಾರ ನಿಡೋಣಿ, ಅನೀಲಕುಮಾರ ಸುರಗೊಂಡ, ಉಮೇಶ ಜೋಶಿ, ಸಂತೋಷ ನಾಯಕ, ರವಿ ಕಾಂಬಳೆ, ಜಾಕೀರ ನದಾಫ, ಜೆ,ಡಿ.ಧನ್ನೂರ, ಲಲಿತಾ ಗಲಗಲಿ, ಜಗದೀಶ ಆಲಕನೂರ, ಶಶಿಕಾಂತ ಮಾಲಗತ್ತಿಮಠ, ವಿಶ್ವನಾಥ ಹರಿಜನ, ಬಾಣಪ್ಪ ನಾಗಠಾಣ, ಗಂಗಾಧರ ಚಾಬುಕಸವಾರ ಸೇರಿದಂತೆ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 