ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಸಚಿವ ಗುಂಡೂರಾವ್ ಧೀಡಿರ್ ಭೇಟಿ
Health Minister Gundurao Dheedir visited Bellary District Hospital
ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಸಚಿವ ಗುಂಡೂರಾವ್ ಧೀಡಿರ್ ಭೇಟಿ
ಬಳ್ಳಾರಿ 07: ನಗರದಲ್ಲಿ ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ಐದು ಜನ ಬಾಣಂತಿಯರು ಸಾವನ್ನಪ್ಪಿದ್ದಕ್ಕೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬೆಳಗನಿಂದ ಜಿಲ್ಲಾ ಆಸ್ಪತ್ರೆ ಮುಂದೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಆದರೆ ಸಂಜೆ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಇಲ್ಲಿಗೆ ಭೇಟಿ ನೀಡಿ, ರಾಮುಲು ಅವರನ್ನು ಭೇಟಿ ಮಾಡಿ ಉಪವಾಸ ಸತ್ಯಾಗ್ರಹ ಕೈ ಬಿಡುವಂತೆ ಮನವಿ ಮಾಡಿದರು. ಈ ಸಮಯದಲ್ಲಿ ಮಾತನಾಡಿದ ಬಿ.ಶ್ರೀರಾಮುಲು ಅವರು, ಬಾಣಂತಿಯರ ಸಾವು ನಿಲ್ಲಬೇಕು. ಆರೋಗ್ಯ ಸಚಿವರು ರಾಜೀನಾಮೆ ಕೊಡಬೇಕಿಲ್ಲ. ಆದರೆ ಆರೋಗ್ಯ ವ್ಯವಸ್ಥೆ ಸುಧಾರಣೆ ಆಗಬೇಕು ಎಂದರು.ರಾಜ್ಯದಲ್ಲಿ ನೂರಾರು ಬಾಣಂತಿಯರು ಸಾವನ್ನಪ್ಪಿದ್ದಾರೆ. ಗುಣ ಮಟ್ಟದ ಓಷಧಿ ಖರೀದಿ ಆಗಬೇಕು. ಪಶ್ಚಿಮ ಬಂಗಾಲದ ಕಂಪನಿಯ ಪ್ಲೂಯಿಡ್ ನಿಂದ ಸತ್ತಿದ್ದಾರೆ ಎಂಬ ಮಾಹಿತಿ ಇದೆ.ವೈದ್ಯರ ನಿರ್ಲಕ್ಷ ಅಲ್ಲ. ಸರಕಾರದ ಲೋಪ ಎಂದರು.ಈ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವಿನಿಂದ ಜನ ಭಯಬಿದ್ದು ಇಲ್ಲಿಗೆ ಬರದಂತಾಗಿದೆ. ಎಷ್ಟು ಬಾಣಂತಿಯರು ಸತ್ತಿದ್ದಾರೆ. ಅವರ ಪೋಸ್ಟ ಮಾರ್ಟಂ ವರದಿ ಎಲ್ಲಿ ಎಂದು ಪ್ರಶ್ನಿಸಿದರು. ಬಡ ಜನರಿಗೆ ವಿಶ್ವಾಸ ತುಂಬಲು ಆಗಿರುವ ತಪ್ಪನ್ನು ಸರಿಯಾದ ಕ್ರಮದಲ್ಲಿ ಪತ್ತೆಹಚ್ಚಿ ಕ್ರಮ ಜರುಗಿಸಬೇಕು. ಹಾಲಿ ನ್ಯಾಯಾಧೀಶರ ಮೂಲಕ ತನಿಖೆ ಆಗಬೇಕು.
ಸತ್ತಿರುವ ಬಾಣಂತಿಯರ ಕೂಸುಗಳಿಗೆ 25 ಲಕ್ಷ ಪರಿಹಾರ ನೀಡಬೇಕು ಎಂದು ಮನವಿ ಮಾಡಿದರು. ಸಚಿವ ದಿನೇಶ್ ಗುಂಡುರಾವ್ ಇದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿ, ಬಾಣಂತಿಯರ ಸಾವು ಸಂಭವಿಸಿದ ತಕ್ಷಣ ತನಿಖಾ ತಂಡವನ್ನು ಕಳಿಸಿದ್ದೆ. ಅವರು ವೈದ್ಯರ ಕರ್ತವ್ಯ ಲೋಪದಿಂದ ಅಲ್ಲ, ಆದರೆ ಪ್ಲೂಯಿಡ್ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಪ್ಲೂಯಿಡ್ ಬಗ್ಗೆ ಅನುಮಾನ ಪಟ್ಟುಈ ಹಿಂದೆ ಪರೀಕ್ಷೆ ಮಾಡಿಸಿದಾಗ ಸರಿಯಿಲ್ಲ ಎಂದು ವರದಿ ಬಂದಿತ್ತು ಇದರಿಂದಾಗಿ ತಡೆ ಹಿಡಿದಿದ್ದರಿಂದ ಅವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದರು. ಕೇಂದ್ರದ ಲ್ಯಾಬ್ಗೆ ಕಳಿಸಿ ಪರೀಕ್ಷೆ ಮಾಡಿ ಸರಿಯಿದೆ ಎಂದು ವರದಿ ಬಂತು. ಹಾಗಾಗಿ ಮುಂದುವರಿಸಿತ್ತಾದರೂ, 22 ಲಾಟ್ ಪರೀಕ್ಷೆ ಸರಿಯಿಲ್ಲ ಎಂದಿದ್ದರಿಂದ ಅದನ್ನು ನಿಲ್ಲಿಸಿತ್ತು. ಡೆಂಗ್ಯೂ ಹೆಚ್ಚಾದಾಗ ಉಳಿದಿದ್ದನ್ನು ಬಳಸಿತ್ತು.
ಈ ಪ್ರಕರಣದಲ್ಲಿ ಯಾವುದನ್ನು ಮುಚ್ಚಿ ಹಾಕಲ್ಲ ರಾಜ್ಯದಲ್ಲಿನ 327 ಬಾಣಂತಿಯರ ಸಾವಿನ ವರದಿ ಕೇಳಿದೆ. ಬಳ್ಳಾರಿ ಪ್ರಕರಣವನ್ನು ಇನ್ನೂ ಉನ್ನತ ಮಟ್ಟದ ತನಿಖೆಯನ್ನು ನಡೆಸಲಿದೆ. ಅಲ್ಲದೆ ಪ್ರಾಸ್ಯುಕೇಷನ್ ಮಾಡಿಸಲಿದೆಂದು ಹೇಳಿ. ನಿಮ್ಮ ಪ್ರತಿಭಟನೆ ಪ್ರಜಾಪ್ರಭುತ್ವದಲ್ಲಿ ಸರಿಯಾದ ಕ್ರಮ, ಬಾಣಂತಿಯರ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸದನದಲ್ಲೂ ಚರ್ಚೆ ಮಾಡಲಿದೆ. ಪರಿಹಾರದ ಬಗ್ಗೆ ಚರ್ಚೆ ಮಾಡಿ ಸೂಕ್ತ ನಿರ್ಧಾರ ಆಗಲಿದೆ ನೀವು ಸತ್ಯಾಗ್ರಹ ಹಿಂದಕ್ಕೆ ಪಡೆಯಬೇಕೆಂದು ಶ್ರೀರಾಮುಲು ಅವರಿಗೆ ಮನವಿ ಮಾಡಿದರು. ಇದರಿಂದಾಗಿ ಶ್ರೀರಾಮುಲು ತಮ್ಮ ಸತ್ಯಾಗ್ರಹ ಹಿಂದಕ್ಕೆ ಪಡೆದರು.ಈ ವೇಳೆ ಶಾಸಕ ಜೆ ಎನ್ ಗಣೇಶ್ , ಸಾಮಾಜಿಕ ಜಾಲತಾಣ ವಕ್ತರರಾದ ವೆಂಕಟೇಶ್ ಹೆಗಡೆ, ಮಾಜಿ ಶಾಸಕ ಸೋಮಶೇಖರ ರೆಡ್ಡಿ, ಬಿಜೆಪಿ ಜಿಲ್ಲಾ ಅಧ್ಯಕ್ಷ ಅನಿಲ್ ನಾಯ್ಡು ಮಲ್ಲಿಕಾರ್ಜುನ ಆಚಾರಿ,ಮೊದಲಾದವರು ಆಗಮಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 