ಮುಂಬೈ ನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ
ಮುಂಬೈ, ಆಗಸ್ಟ್ 3 ವಾಣಿಜ್ಯ ರಾಜಧಾನಿ ಮುಂಬೈನಲ್ಲಿ ಶನಿವಾರ ಭಾರಿ ಮಳೆಯಿಂದಾಗಿ ಸಾಮಾನ್ಯ ಜೀವನ ಅಸ್ತವ್ಯಸ್ತಗೊಂಡಿದೆ.
ಮುಂದಿನ 24 ಗಂಟೆಗಳ ನಂತರವೂ ಮುಂಬೈ, ಉಪನಗರಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಹವಾಮಾನ ವಿಭಾಗದ ಉಪ ಮಹಾನಿರ್ದೇಶಕ ಕೆ.ಎಸ್.ಹೊಸಲಿಕರ್ ಅವರು, ಬಂಗಾಳಕೊಲ್ಲಿ ಪ್ರದೇಶದ ಮೇಲೆ ವಾಯುಭಾರ ಕುಸಿತದ ಕಾರಣ ಶನಿವಾರ ರಾತ್ರಿ ಮತ್ತು ಭಾನುವಾರ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಟ್ವೀಟ್ ಮಾಡಿದ್ದಾರೆ.
ವರದಿಯ ಪ್ರಕಾರ ಶನಿವಾರದಂದು ಭಾರಿ ಮಳೆಯಾಗುವ ಸೂಚನೆ ನೀಡಿದ್ದು ಅತಿ ಹೆಚ್ಚು 4.90 ಮೀಟರ್ ಎತ್ತರದ ಉಬ್ಬರವಿಳಿತ ಉಂಟಾಗಲಿದ್ದು, ಸಮುದ್ರದ ಬಳಿ ಹೋಗದಂತೆ ಜನರಿಗೆ ಮನವಿ ಮಾಡಲಾಗಿದೆ. ತುರ್ತ ಪರಿಸ್ಥಿತಿಯ ಸಮಯದಲ್ಲಿ ಜನರು 1916 ಸಂಖ್ಯೆಗೆ ಕರೆ ಮಾಡಬಹುದು ಎಂದೂ ಮುಂಬೈ ಮಹಾನಗರ ಪಾಲಿಕೆ ಟ್ವೀಟ್ ಮಾಡಿದೆ. ಮಳೆಯಿಂದ ಹಲವಡೆ ನೀರು ನಿಂತು ರಸ್ತೆ ಮತ್ತು ರೈಲುಗಳ ಸಂಚಾರಕ್ಕೂ ತೊಂದರೆಯಾಗಿದೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 