ಗ್ರಾಹಕರು ಆರ್ಥಿಕವಾಗಿ ಸಬಲರಾಗುವ ಜೊತೆಗೆ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಿ
Helping customers become financially empowered and contributing to the development of the bank
ಗ್ರಾಹಕರು ಆರ್ಥಿಕವಾಗಿ ಸಬಲರಾಗುವ ಜೊತೆಗೆ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಿ
ಕಂಪ್ಲಿ 09: ಪಟ್ಟಣದ ಕಲ್ಗುಡಿ ಮಂಜುನಾಥ ಕಾಂಪ್ಲೆಕ್ಸ್ನಲ್ಲಿರುವ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಕಂಪ್ಲಿ ನೂತನ ಶಾಖೆ ಭಾನುವಾರ ಆರಂಭಿಸಲಾಯಿತು.
ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಅಧ್ಯಕ್ಷ ಗಿರಿಯಪ್ಪ ಹೊಸ್ಕೇರಿ ಇವರು ನೂತನ ಕಂಪ್ಲಿ ಶಾಖೆ ಉದ್ಘಾಟಿಸಿ ಮಾತನಾಡಿ, ಶ್ರೀ ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಮುಖ್ಯಶಾಖೆಯು ಗಂಗಾವತಿ ನಗರದಲ್ಲಿ ಕಿ.ಶ.1996ರಲ್ಲಿ ಹುಟ್ಟಿಕೊಂಡಿದೆ. ಮೊದಲಿಗೆ ಕಾರಟಿಗಿ ಶಾಖೆ ಇದ್ದು, ಈಗ ಕಂಪ್ಲಿಯಲ್ಲಿ ಶಾಖೆ ಆರಂಭಿಸಲಾಯಿತು. ಬ್ಯಾಂಕ್ ಸುಮಾರು 99 ಕೋಟಿ ದುಡಿಯುವ ಬಂಡವಾಳ ಹೊಂದಿದೆ. ಆರ್ಬಿಐ ನಿರ್ದೇಶನದಂತೆ ಸಾಲ ಸೌಲಭ್ಯಗಳನ್ನು ಒದಗಿಸಲಾಗುವುದು. ಜನರ ಉಳಿತಾಯ ಭವಿಷ್ಯದ ಭದ್ರತೆಗೆ ಅಡಿಪಾಯವಾಗಿದೆ. ಠೇವಣಿ(ಎಫ್ಡಿ) ಯೋಜನೆಯ ಮೇಲೆ ಬಡ್ಡಿ ದರಗಳನ್ನು ನಿಗದಿಪಡಿಸಲಾಗಿದೆ. ಕಂಪ್ಲಿ ಹಾಗೂ ಗ್ರಾಮೀಣ ಭಾಗದ ಜನರು ಇಲ್ಲಿನ ಬ್ಯಾಂಕ್ನಲ್ಲಿ ವ್ಯವಹರಿಸಿ, ಸಾಲ ಸೌಲಭ್ಯಗಳನ್ನು ಪಡೆದು, ಆರ್ಥಿಕವಾಗಿ ಸಬಲರಾಗುವ ಜತೆಗೆ ಬ್ಯಾಂಕ್ ಅಭಿವೃದ್ಧಿಗೆ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಗಂಗಾವತಿ ಮಾಜಿ ಶಾಸಕ ಪರಣ್ಣ ಮುನ್ನವಳ್ಳಿ, ಮಾಜಿ ಸಂಸದ ಶಿವರಾಮೇಗೌಡ, ಚನ್ನಬಸವಸ್ವಾಮಿ ಸೌಹಾರ್ದ ಸಹಕಾರಿ ಬ್ಯಾಂಕ್ ಸದಸ್ಯರಾದ ಕೆ.ಕಾಳಪ್ಪ, ರಾಜಪ್ಪ, ಸಿಒ ನಾಗೇಶ ಗೌಳಿ, ಮ್ಯಾನೇಜರ್ ಶಾಮ್ಸುಂದರ್, ಮುಖಂಡರಾದ ಕೆ.ಎಂ.ಹೇಮಯ್ಯಸ್ವಾಮಿ, ಶ್ರೀಧರ ಶ್ರೇಷ್ಠಿ, ಬಿ.ರವೀಂದ್ರ, ಪ್ರಸಾದ್ ಗಡಾದ್, ಕಲ್ಗುಡಿ ವಿಶ್ವನಾಥ ಸೇರಿದಂತೆ ಸಿಬ್ಬಂದಿ ಇದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 