ರಸ್ತೆ, ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ: ಶಾಸಕ ಐಹೊಳೆ
High priority is being given to road and bridge construction: MLA Aihole
ರಾಯಬಾಗ, 30 : ರೈತರ ಆರ್ಥಿಕ ಸುಧಾರಣೆಗೆ ಸುವ್ಯವಸ್ಥಿತ ರಸ್ತೆಗಳ ಅಗತ್ಯವಿದ್ದು, ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಡಿ.ಎಮ್.ಐಹೊಳೆ ಹೇಳಿದರು.
ಭಾನುವಾರ ತಾಲೂಕಿನ ನಾಗರಾಳ ಗ್ರಾಮದಲ್ಲಿ ಜಿ.ಪಂ.ಇಲಾಖೆಯಿಂದ ಮಂಜೂರಾದ 25 ಲಕ್ಷ ರೂ. ಅನುದಾನದಲ್ಲಿ ಗ್ರಾಮದ ಹನುಮಾನ ಮಂದಿರದಿಂದ ರೈಲ್ವೆ ಓವರ್ ಬ್ರಿಡ್ಜ್ ವರಗೆ ರಸ್ತೆ ನಿರ್ಮಾಣ ಕಾಮಗಾರಿ ಹಾಗೂ ರಾಯಬಾಗ ಗ್ರಾಮೀಣ ಭಾಗದ ಆನೇಬಾಯಿಕೊಡಿಯಲ್ಲಿ ಕುಡಚಿ ಜೆ.ಎಲ್.ಬಿ.ಸಿ ಇಲಾಖೆಯಿಂದ ಮಂಜೂರಾದ 20 ಲಕ್ಷ ರೂ.ಅನುದಾನದಲ್ಲಿ ರಾಯಬಾಗ ಹಂಚು ಕಾಲುವೆಗೆ ಸೇತುವೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ಬೆಳೆದ ಬೆಳೆಗಳನ್ನು ಸಕಾಲದಲ್ಲಿ ಮಾರುಕಟ್ಟೆಗೆ ತಲುಪಸಲು ಗುಣಮಟ್ಟದ ರಸ್ತೆಗಳ ಅಗತ್ಯವಿದೆ ಎಂದರು.
ಜಿ.ಪಂ.ಇಲಾಖೆ ಎಇ ಎಸ್.ಎಸ್.ಹೊಸಮನಿ, ಜೆ.ಎಲ್.ಬಿ.ಸಿ ಎಇಇ ಮಹ್ಮದ ಮುಸ್ತಾಫ, ಸದಾಶಿವ ಘೋರೆ್ಡ, ಅಣ್ಣಾಸಾಹೇಬ ಖೇಮಲಾಪೂರೆ, ಅಪ್ಪಾಸಾಹೇಬ ಕೆಂಗನ್ನವರ, ಸತ್ಯಪ್ಪ ದಾವಣೆ, ಮಜ್ಜಿದ ಡಾಂಗೆ, ಗೋಪಾಲ ಕೊಚೆರಿ, ಅಸ್ಲಂ ಡಾಂಗೆ, ಅಣ್ಣಾಸಾಹೇಬ ಮಗದುಮ್ಮ, ಭೀಮು ಮುಧೊಳೆ, ರಾಜು ಚೌಗಲಾ, ಬಸು ಮಗದುಮ್ಮ, ರಾಜು ಐಹೊಳೆ,ಶಾಹುರ ಡಾಂಗೆ, ಸಲೀಂ ಡಾಂಗೆ, ದಾವುದ ಡಾಂಗೆ, ಅಯುಬ ಡಾಂಗೆ, ರಂಜಾನ ಮಕಾನದಾರ, ಅಬು ಡಾಂಗೆ ಸೇರಿ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 