ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಶಾಸಕ ಸಿ.ಎಸ್. ನಾಡಗೌಡ ಅನಿಸಿಕೆ ! ನಿಯೋಜಿತ ಬಸ್ ಡಿಪೋ ಸ್ಥಳ ಪರೀಶೀಲನೆ
High-tech touch to the bus station: MLA C.S. Nadagowda's impression! Inspection of the designated b
ಮುದ್ದೇಬಿಹಾಳ 10: ಪಟ್ಟಣದ ಕೆಎಸ್ಆರಿ್ಟಸಿ ಬಸ್ ನಿಲ್ದಾಣ ಹಾಗೂ ಹಡಲಗೇರಿ ರಸ್ತೆ ಮಾರ್ಗದಲ್ಲಿರುವ ನಿಯೋಜಿತ ಬಸ್ ಡಿಪೋ ಸರ್ಕಾರಿ ಖುಲ್ಲಾ ಜಾಗೆಯ ಸ್ಥಳಕ್ಕೆ ಶಾಸಕ ಹಾಗೂ ಕರ್ನಾಟಕ ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮ ಅಧ್ಯಕ್ಷ ಸಿ.ಎಸ್. ನಾಡಗೌಡ(ಅಪ್ಪಾಜಿ) ಶನಿವಾರ ಭೇಟಿ ನೀಡಿ ಪರೀಶೀಲಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2012ರಲ್ಲಿ ಹಳೇ ಬಸ್ ನಿಲ್ದಾಣ ನೆಲಸಮ ಮಾಡಿ ಪ್ರಸ್ತುತ ಕೆಎಸ್ಆರಿ್ಟ ಬಸ್ ನಿಲ್ದಾಣದ ನೂತನ ಕಟ್ಟಡಕ್ಕೆ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಶಂಕು ಸ್ಥಾಪನೆ ನೆರವೇರಿಸಿದ್ದರು. ಸ್ಮಾರ್ಟ್ ಸಿಟಿ ಅಡಿ ಹೈಟೆಕ್ ಟಚ್ ಹಾಗೂ ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಲಾಯಿತು. ಬಳಿಕ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೂತನ ಬಸ್ ನಿಲ್ದಾಣ ಲೋಕಾರೆ್ಣಗೊಳಿಸಿ ಪ್ರಯಾಣಿಕರಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗಿತ್ತು ಎಂದರು.
ಸದ್ಯ ಹಾಲಿ ಕೆಎಸ್ಆರಿ್ಟಸಿ ಬಸ್ ನಿಲ್ದಾಣದ ಹೋರಾಂಗಣ ಸಿಸಿ ರಸ್ತೆ, ಹೈಟೆಕ್ ಶೌಚಾಲಯ, ಶುದ್ಧ ಕುಡಿಯುವ ನೀರು, ಮಳೆ ನೀರು ಸೂರದಂತೆ ಹಾಗೂ ಸ್ವಚ್ಛತೆ ಸೇರಿದಂತೆ ಹಲವು ರೀತಿಯ ನವೀಕರಣಗೊಳಿಸುವುದರ ಜತೆಗೆ ಈಗಿರುವ ಡಿಪೋ ಅನ್ನು ಮತ್ತಷ್ಟು ಅಭಿವೃದ್ಧಿ ಪಡಿಸಲು ಸರ್ಕಾರದಿಂದ ಸುಮಾರು 5 ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದೇನೆ ಎಂದು ಮಾಹಿತಿ ನೀಡಿದರು.ಇದಷ್ಟೇ ಅಲ್ಲದೇ ತಾಯಂದಿರು ತಮ್ಮ ಮಕ್ಕಳಿಗೆ ಹಾಲುಣಿಸಲು ಪ್ರತ್ಯೇಕ ಕೊಠಡಿಗಳ ವ್ಯವಸ್ಥೆ ಮಾಡುವುದು. ಜತೆಗೆ ಕೆಎಸ್ಆರಿ್ಟ ಸಿಗೆ ಇನ್ನಷ್ಟು ಆದಾಯ ಬರುವಂತೆ ಮಾಡಲು ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ್ಠ್ಧಸ್ತ್ಠ್ತ್ಘ್ದು.ವಿ್ಲ್ಢೂಳ್ಲ್ಚ್ದ್ಲ್ಖೈ್ಪೂವ್ಠ್ಲ್ಢಿಪ್ಘ್ಲ್ಢಳ್ತ್ಠ್ತಿ ಡಿಸಿ ನಾರಾಯಣಪ್ಪ ಕುರುಬರ, ಎಂಜಿನಿಯರ್ ಮಲ್ಲಿಕಾರ್ಜುನ ಬಿರಾದಾರ ಕಾಂಗ್ರೇಸ್ ಮುಖಂಡ ಗೋಪಿ ಮಡಿವಾಳರ, ಸೇರಿದಂತೆ ಇತರ ಅಧಿಕಾರಿಗಳು ಇದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 